Mysore Temple
ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಒಂಟಿಕೊಪ್ಪಲು, ಮಂಡಿ ಮೊಹಲ್ಲಾ, ಕುವೆಂಪುನಗರ, ಸುಣ್ಣದಕೇರಿ, ಜಯನಗರ, ಅಶೋಕಪುರಂ, ಕಾಕರವಾಡಿ, ದೊಡ್ಡ ಒಕ್ಕಲಗೇರಿಗಳಲ್ಲಿರುವ ನಾನಾ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆದವು. ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು. ಮಹಿಳೆಯರು ನಿಂಬೆ ಹಣ್ಣಿನ ದೀಪ ಹಚ್ಚುವ ಮೂಲಕ ಹರಕೆ ತೀರಿಸಿದರು. ನಗರದ ಪ್ರಮುಖ ಆಟೋ ನಿಲ್ದಾಣ ಮತ್ತು ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭಕ್ತಿ ಭಾವ ಮೆರೆದರು.
ನಗರದ ಕೆ.ಜಿ. ಕೊಪ್ಪಲಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರ್ಧಂತಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ದೇವಿಗೆ ನಾನಾ ಅಭಿಷೇಕ, ಮಹಾ ಮಂಗಳಾರತಿ ನೆರವೇರಿಸಿದ ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ವಿಜಯನಗರದಲ್ಲಿರುವ ಸಪ್ತಮಾತೃಕೆಯರ ದೇವಸ್ಥಾನದಲ್ಲೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಿತು. ಪೋರ್ಟ್ ಮೊಹಲ್ಲಾದಲ್ಲಿರುವ ಅಭಿನವ ಶಂಕರಾಲಯ ಶಂಕರ ಮಠದಲ್ಲಿ ವಿಶೇಷ ಮಹೋತ್ಸವ, ಅಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಯಿತು. ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಕೊಲ್ಲಾಪುರದಮ್ಮ ದೇವಸ್ಥಾನ, ತಿಲಕ್ ನಗರದಲ್ಲಿರುವ ಎಲ್ಲಮ್ಮ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ನಂತರ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕೈಂಕರ್ಯಗಳು ಜರುಗಿದವು.
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…