ಮೈಸೂರು

ಚಾಮುಂಡಿ ಯದುವಂಶದ ಕುಲದೇವಿ : ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು.

ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನು ಬೇಕಾದರೂ ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಮನೆತನ, ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲಷ್ಟೇ ಎಲ್ಲವೂ ಸ್ಪಷ್ಟ ಆಗುವುದು. ೭೦ ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿ ಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನು ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯಲಿದೆ. ಸರ್ಕಾರದವರು ಅವರಿಗೆ ಬೇಕಾದ ರೀತಿಯಲ್ಲಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದರು.

ದಸರಾ ದಿನ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ. ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರ ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

10 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

11 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

11 hours ago