ಮೈಸೂರು

ಚಾಮುಂಡಿ ಯದುವಂಶದ ಕುಲದೇವಿ : ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು.

ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನು ಬೇಕಾದರೂ ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಮನೆತನ, ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲಷ್ಟೇ ಎಲ್ಲವೂ ಸ್ಪಷ್ಟ ಆಗುವುದು. ೭೦ ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿ ಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನು ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯಲಿದೆ. ಸರ್ಕಾರದವರು ಅವರಿಗೆ ಬೇಕಾದ ರೀತಿಯಲ್ಲಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದರು.

ದಸರಾ ದಿನ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ. ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರ ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago