ಮೈಸೂರು: ದಸರಾ ಹಬ್ಬದ 9ನೇ ದಿನದಂದು ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ, ಚಂಡಿಕಾ ಹೋಮ ಸಂಪನ್ನಗೊಂಡಿತು. ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ರಾಜ ವಂಶಸ್ಥರು ಪಟ್ಟದ ಆನೆ, ಹಸು, ಕುದುರೆ, ಒಂಟೆ, ಪಲ್ಲಕ್ಕಿ ಹಾಗೂ ಅವರು ಬಳಸುವ ಅದ್ಧೂರಿ ಕಾರುಗಳಿಗೆ ಪೂಜೆ ಸಲ್ಲಿಸಿದರು.
ನಾಡಹಬ್ಬ ದಸರಾದ 9ನೇ ದಿನ ಆಯುಧ ಪೂಜೆ ಕೈಂಕರ್ಯಗಳು ಅಂಬಾವಿಲಾಸ ಅರಮನೆಯಲ್ಲಿ ಸುಸೂತ್ರವಾಗಿ ನೆರೆವೇರಿತು. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಪೂಜಾ ವಿಧಿವಿಧಾನ 12.30ಕ್ಕೆ ಅಂತ್ಯವಾಯಿತು.
ಬೆಳಗ್ಗೆಯಿಂದಲೇ ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನ ಆಯುಧ ಪೂಜೆ ಧಾರ್ಮಿಕ ಕೈಂಕರ್ಯಗಳು ನಡೆದವು. ಬೆಳಗ್ಗೆ 6 ರಿಂದ ಚಂಡಿಕಾ ಹೋಮ ನಡೆದು 9 ಗಂಟೆಗೆ ಹೋಮ ಪೂರ್ಣಾಹುತಿ ಆಯಿತು. 10.30 ರ ಸುಮಾರಿಗೆ ಮತ್ತೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವನ್ನು ಆನೆ ಬಾಗಿಲಿಗೆ ತರಲಾಗುತ್ತದೆ. ಆ ನಂತರ ಆನೆ ಬಾಗಿಲಿನ ಮೂಲಕ ಕಲ್ಯಾಣ ಮಂಟಪದ ಒಳಗೆ ತೆರಳಿ ಖಾಸಗಿ ಆಯುಧಗಳಿಗೆ ಪೂಜೆ ಸಲ್ಲಿಸಿದರು. ನಂತರ ರಾಜ ವಂಶಸ್ಥರು ಪಟ್ಟದ ಆನೆ, ಹಸು, ಕುದುರೆ, ಒಂಟೆ, ಪಲ್ಲಕ್ಕಿ ಹಾಗೂ ಅವರು ಬಳಸುವ ಅದ್ಧೂರಿ ಕಾರುಗಳಿಗೆ ಪೂಜೆ ಸಲ್ಲಿಸಿದರು.
ಮತ್ತೊಂದೆಡೆ ಅಜ್ಜಿ ಪ್ರಮೋದಾದೇವಿ ಒಡೆಯರ್ ಜೊತೆ ಯದುವೀರ್ ಪುತ್ರ ಆದ್ಯವೀರ್ ಅಪ್ಪ ಮಾಡಿದ ಪೂಜೆಯನ್ನ ಅರಮನೆ ಮೇಲಿನಿಂದ ವೀಕ್ಷಣೆ ಮಾಡಿದರು.. ಅರ್ಧ ಗಂಟೆಗೂ ಹೆಚ್ಚು ಕಾಲ ವಿಧಿವಿಧಾನವನ್ನ ನೋಡಿದ್ರು. ಆದ್ಯವೀರ್ ನಗು ಎಲ್ಲರ ಮನಸೂರೆ ಗೊಂಡಿತು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…