ಮೈಸೂರು

ಮೈಸೂರು ಅರಮನೆಯಲ್ಲಿ ಆಯುಧಪೂಜೆ, ಚಂಡಿಕಾಹೋಮ ಸಂಪನ್ನ

ಮೈಸೂರು: ದಸರಾ ಹಬ್ಬದ 9ನೇ ದಿನದಂದು ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ, ಚಂಡಿಕಾ ಹೋಮ ಸಂಪನ್ನಗೊಂಡಿತು. ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ರಾಜ ವಂಶಸ್ಥರು ಪಟ್ಟದ ಆನೆ, ಹಸು, ಕುದುರೆ, ಒಂಟೆ, ಪಲ್ಲಕ್ಕಿ ಹಾಗೂ ಅವರು ಬಳಸುವ ಅದ್ಧೂರಿ ಕಾರುಗಳಿಗೆ ಪೂಜೆ ಸಲ್ಲಿಸಿದರು.

ನಾಡಹಬ್ಬ ದಸರಾದ 9ನೇ ದಿನ ಆಯುಧ ಪೂಜೆ ಕೈಂಕರ್ಯಗಳು ಅಂಬಾವಿಲಾಸ ಅರಮನೆಯಲ್ಲಿ ಸುಸೂತ್ರವಾಗಿ ನೆರೆವೇರಿತು. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆಯನ್ನ ನೆರವೇರಿಸಿದರು. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಪೂಜಾ ವಿಧಿವಿಧಾನ 12.30ಕ್ಕೆ ಅಂತ್ಯವಾಯಿತು.
ಬೆಳಗ್ಗೆಯಿಂದಲೇ ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನ ಆಯುಧ ಪೂಜೆ ಧಾರ್ಮಿಕ ಕೈಂಕರ್ಯಗಳು ನಡೆದವು. ಬೆಳಗ್ಗೆ 6 ರಿಂದ ಚಂಡಿಕಾ ಹೋಮ ನಡೆದು 9 ಗಂಟೆಗೆ ಹೋಮ ಪೂರ್ಣಾಹುತಿ ಆಯಿತು. 10.30 ರ ಸುಮಾರಿಗೆ ಮತ್ತೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವನ್ನು ಆನೆ ಬಾಗಿಲಿಗೆ ತರಲಾಗುತ್ತದೆ. ಆ ನಂತರ ಆನೆ ಬಾಗಿಲಿನ ಮೂಲಕ ಕಲ್ಯಾಣ ಮಂಟಪದ ಒಳಗೆ ತೆರಳಿ ಖಾಸಗಿ ಆಯುಧಗಳಿಗೆ ಪೂಜೆ ಸಲ್ಲಿಸಿದರು. ನಂತರ ರಾಜ ವಂಶಸ್ಥರು ಪಟ್ಟದ ಆನೆ, ಹಸು, ಕುದುರೆ, ಒಂಟೆ, ಪಲ್ಲಕ್ಕಿ ಹಾಗೂ ಅವರು ಬಳಸುವ ಅದ್ಧೂರಿ ಕಾರುಗಳಿಗೆ ಪೂಜೆ ಸಲ್ಲಿಸಿದರು.

ಮತ್ತೊಂದೆಡೆ ಅಜ್ಜಿ ಪ್ರಮೋದಾದೇವಿ ಒಡೆಯರ್ ಜೊತೆ ಯದುವೀರ್ ಪುತ್ರ ಆದ್ಯವೀರ್ ಅಪ್ಪ ಮಾಡಿದ ಪೂಜೆಯನ್ನ ಅರಮನೆ ಮೇಲಿನಿಂದ ವೀಕ್ಷಣೆ ಮಾಡಿದರು.. ಅರ್ಧ ಗಂಟೆಗೂ ಹೆಚ್ಚು ಕಾಲ ವಿಧಿವಿಧಾನವನ್ನ ನೋಡಿದ್ರು. ಆದ್ಯವೀರ್ ನಗು ಎಲ್ಲರ ಮನಸೂರೆ ಗೊಂಡಿತು.

andolana

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

41 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

1 hour ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

2 hours ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

3 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago