ಮೈಸೂರು

ಪ್ರವಾಸದ ಆಸೆ ತೋರಿಸಿ ಗ್ರಾಹಕರಿಗೆ ಮೋಸ: 5 ಲಕ್ಷಕ್ಕೂ ಅಧಿಕ ವಂಚನೆ

ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪವನ್ ಪ್ರಭು, ಬೆಂಗಳೂರಿನ ಎಚ್ ಎಸ್ ಆರ್ ಬಡಾವಣೆಯಲ್ಲಿ ವಾಸವಿದ್ದನು ಎನ್ನಲಾಗಿದೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಜೊತೆ ನಂಟಿದೆ ಎಂದು ಹೇಳಿಕೊಂಡಿದ್ದು, ನಂಬಿಕೆ ಬರುವಂತೆ ನಟಿಸಿ 21 ಜನರಿಗೆ ಮೋಸ ಮಾಡಿದ್ದಾನೆ.

ಇದನ್ನೂ ಓದಿ:- ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು

ಪಿರಿಯಾಪಟ್ಟಣದಲ್ಲಿ 6, ಮೈಸೂರಿನಲ್ಲಿ 2, ಕೊಡಗು ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ಹಲವರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ದೂರು ನೀಡಿದರು ಪಿರಿಯಾಪಟ್ಟಣ ಪೊಲೀಸರು, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿಕೊಳ್ಳುತ್ತಿದ್ದಾರೆ ಎಂದು ಜನತೆ ಗಂಭೀರ ಆರೋಪ ಮಾಡಿದ್ದು, ಹಣ ಕಳೆದುಕೊಂಡಿರುವವರು ಈಗ ಕಂಗಾಲಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…

18 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

38 mins ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

52 mins ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಏಪ್ರಿಲ್.‌15ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ…

1 hour ago

ಇನ್ನೂ ಪತ್ತೆಯಾಗದ ಬಾಲಕಿ ಶ್ರೀನಂದಾ ; ಚಂದ್ರದ್ರೋಣ ಬೆಟ್ಟದಲ್ಲಿ ಮುಂದುವರೆದ ಶೋಧ ಕಾರ್ಯ

ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ…

1 hour ago