ಮೈಸೂರು

ಪ್ರತಿ ಪಂಚಾಯ್ತಿಯಲ್ಲೂ ಕಾಲಕಾಲಕ್ಕೆ ನೀರು ಪರೀಕ್ಷಿಸಿ: ಗಾಯಿತ್ರಿ

ಮೈಸೂರು:  ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT  ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ. ಕೆ.ಎಂ ಗಾಯಿತ್ರಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯಿತ್‌ ಸಭಾಂಗಣದಲ್ಲಿನಡೆದ ಜಿಲ್ಲೆಯ ಎಲ್ಲಾ ತಾಲೂಕುಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ  Field Test Kit (FTK) ಮೂಲಕ ನೀರಿನ ಗುಣಮಟ್ಟವನ್ನು ಪರೀಕ್ಷಿಸುವ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀರಿನ ಮಾದರಿಗಳನ್ನು ಪರೀಕ್ಷಿಸಿದ ವರದಿಯನ್ನು WQMIS ಪೋರ್ಟಲ್ ನಲ್ಲಿ ಅಪಲೋಡ್‌ ಮಾಡಬೇಕು ಹಾಗೂ ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು  ಮಾಡಿ ಎಂದರು.

ಜೊತೆಗೆ WQMS ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿ ಮತ್ತು ಕಾರ್ಯವೈಖರಿಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ  ರಂಜಿತ್ ಕುಮಾರ್ ಎ. ಎಸ್ ಮಾತನಾಡಿ,  FTK Kit ಮತ್ತು H2S ಪರೀಕ್ಷೆಗಳನ್ನು ಬಳಸಿಕೊಂಡು ಗ್ರಾಮಗಳ ಹಂತದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ. ಕೃಷ್ಣರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಾದ ರಂಜಿತ್ ಕುಮಾರ್ , ಜಿಪಂ ಉಪಕಾರ್ಯದರ್ಶ (ಆಡಳಿತ) ಸವಿತಾ, ಶ್ರೀಮತಿ ಮೇಘಲ, ಯೋಜನಾ ನಿರ್ದೇಶಕರು, ಶ್ರೀ ರುದ್ರೇಶ್, ಉಪ ನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

2 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

2 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

2 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

2 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

2 hours ago