ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ. ಕೆ.ಎಂ ಗಾಯಿತ್ರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿನಡೆದ ಜಿಲ್ಲೆಯ ಎಲ್ಲಾ ತಾಲೂಕುಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ Field Test Kit (FTK) ಮೂಲಕ ನೀರಿನ ಗುಣಮಟ್ಟವನ್ನು ಪರೀಕ್ಷಿಸುವ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀರಿನ ಮಾದರಿಗಳನ್ನು ಪರೀಕ್ಷಿಸಿದ ವರದಿಯನ್ನು WQMIS ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಹಾಗೂ ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ ಎಂದರು.
ಜೊತೆಗೆ WQMS ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿ ಮತ್ತು ಕಾರ್ಯವೈಖರಿಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್ ಕುಮಾರ್ ಎ. ಎಸ್ ಮಾತನಾಡಿ, FTK Kit ಮತ್ತು H2S ಪರೀಕ್ಷೆಗಳನ್ನು ಬಳಸಿಕೊಂಡು ಗ್ರಾಮಗಳ ಹಂತದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ. ಕೃಷ್ಣರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಾದ ರಂಜಿತ್ ಕುಮಾರ್ , ಜಿಪಂ ಉಪಕಾರ್ಯದರ್ಶ (ಆಡಳಿತ) ಸವಿತಾ, ಶ್ರೀಮತಿ ಮೇಘಲ, ಯೋಜನಾ ನಿರ್ದೇಶಕರು, ಶ್ರೀ ರುದ್ರೇಶ್, ಉಪ ನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…