ಮೈಸೂರು

ಚೆನ್ನೈ: ಕೆಲಸ ಕೊಡಿಸುವ ನೆಪದಲ್ಲಿ ಮೈಸೂರಿನ ಯುವತಿಗೆ ಲೈಂಗಿಕ ದೌರ್ಜನ್ಯ

ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಈ ಘಟನೆ ಸಂಬಂಧ ಚೆನ್ನೈ ಪೊಲೀಸರು ಆರೋಪಿ ಹಾಗೂ ಸಹಚರಳನ್ನು ಬಂಧಿಸಿದ್ದಾರೆ. ವೆಲ್ಲೂರು ಮೂಲದ ಸತೀಶ್(32) ಬಂಧಿತ ಆರೋಪಿ. ಈತನ ಸಹಚರೆ ಎನ್ನಲಾದ ಮಡಿಪಾಕ್ಕಾಂ ಮೂಲದ ಶಕೀಲಾ(33) ಎಂಬಾಕೆಯನ್ನೂ ಸಹ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸತೀಶ್‌ ಲಾರಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತಿದ್ದ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ವಿವರ:
ಯುವತಿಯು ತನ್ನ ತಂದೆ ತಾಯಿಯನ್ನು ಕೊಯಮ್ಮತ್ತೂರಿನಲ್ಲಿ ಬಿಟ್ಟು. ಉದ್ಯೋಗ ಹರಸಿ ಚೆನ್ನೈಗೆ ಬಂದಿದ್ದಳು. ಚೆನ್ನೈನ ಕೋವಿಲಂಬಾಕ್ಕಂನಲ್ಲಿರುವ ಸ್ನೇಹಿತರ ಮನೆಗೆ ತೆರಳಿದ್ದಳು. ಯುವತಿ ಬಳಿಕ ಮೈಸೂರಿಗೆ ಹೋಗಬೇಕೆಂದು ನಿರ್ಧರಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದಳು.

ಈ ವೇಳೆ ವ್ಯಕ್ತಿಯೊರ್ವ ಯುವತಿಯನ್ನು ಪರಿಚಯ ಮಾಡಿಕೊಂಡು, ನಿನಗೆ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿದ್ದಾನೆ. ಅಲ್ಲದೇ, ಕೆಲಸ ಸಿಗುವವರೆಗೂ ತನ್ನ ಸ್ನೇಹಿತೆಯ ಮನೆಯಲ್ಲಿ ಇರುವಂತೆ ಹೇಳಿದ್ದನು. ಇದನ್ನೇ ನಂಬಿದ ಯುವತಿ ವ್ಯಕ್ತಿ ಹೇಳಿದ ಅರುಂಬಕ್ಕಂನಲ್ಲಿರುವ ಮನೆಯೊಂದಕ್ಕೆ ತಂಗಲು ಹೋದಳು.

ಆದರೆ, ಅಲ್ಲಿಗೆ ತಲುಪಿದ ಬಳಿಕ ಮನೆ ಬಾಗಿಲು ಹಾಕಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆರೋಪಿಯ ಗೆಳತಿ ಶಕೀಲಾ ಕೂಡ ಅಲ್ಲಿಯೇ ಇದ್ದಳು ಎನ್ನಲಾಗಿದೆ.

ನಂತರ ಸಂತ್ರಸ್ತೆ ಯುವತಿಯು ಮೊಬೈಲ್‌ ಮೂಲಕ ಪೊಲೀಸ್‌ರನ್ನು ಸಂಪರ್ಕಿಸಿ, ತನ್ನ ಮೇಲೆ ನಡೆದ ಕೃತ್ಯದ ಬಗ್ಗೆ ದೂರು ನೀಡಿದ್ದಾಳೆ. ಅಂತಯೇ, ಕೊಯಂಬೆಡು ಮಹಿಳಾ ಪೊಲೀಸರು ಬಂದು ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.

ಯುವತಿ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ, ದುರುಳ ಆರೋಪಿಗಳನ್ನು ಬಂಧಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago