ಮೈಸೂರು

ಚೆನ್ನೈ: ಕೆಲಸ ಕೊಡಿಸುವ ನೆಪದಲ್ಲಿ ಮೈಸೂರಿನ ಯುವತಿಗೆ ಲೈಂಗಿಕ ದೌರ್ಜನ್ಯ

ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಈ ಘಟನೆ ಸಂಬಂಧ ಚೆನ್ನೈ ಪೊಲೀಸರು ಆರೋಪಿ ಹಾಗೂ ಸಹಚರಳನ್ನು ಬಂಧಿಸಿದ್ದಾರೆ. ವೆಲ್ಲೂರು ಮೂಲದ ಸತೀಶ್(32) ಬಂಧಿತ ಆರೋಪಿ. ಈತನ ಸಹಚರೆ ಎನ್ನಲಾದ ಮಡಿಪಾಕ್ಕಾಂ ಮೂಲದ ಶಕೀಲಾ(33) ಎಂಬಾಕೆಯನ್ನೂ ಸಹ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸತೀಶ್‌ ಲಾರಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತಿದ್ದ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ವಿವರ:
ಯುವತಿಯು ತನ್ನ ತಂದೆ ತಾಯಿಯನ್ನು ಕೊಯಮ್ಮತ್ತೂರಿನಲ್ಲಿ ಬಿಟ್ಟು. ಉದ್ಯೋಗ ಹರಸಿ ಚೆನ್ನೈಗೆ ಬಂದಿದ್ದಳು. ಚೆನ್ನೈನ ಕೋವಿಲಂಬಾಕ್ಕಂನಲ್ಲಿರುವ ಸ್ನೇಹಿತರ ಮನೆಗೆ ತೆರಳಿದ್ದಳು. ಯುವತಿ ಬಳಿಕ ಮೈಸೂರಿಗೆ ಹೋಗಬೇಕೆಂದು ನಿರ್ಧರಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದಳು.

ಈ ವೇಳೆ ವ್ಯಕ್ತಿಯೊರ್ವ ಯುವತಿಯನ್ನು ಪರಿಚಯ ಮಾಡಿಕೊಂಡು, ನಿನಗೆ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿದ್ದಾನೆ. ಅಲ್ಲದೇ, ಕೆಲಸ ಸಿಗುವವರೆಗೂ ತನ್ನ ಸ್ನೇಹಿತೆಯ ಮನೆಯಲ್ಲಿ ಇರುವಂತೆ ಹೇಳಿದ್ದನು. ಇದನ್ನೇ ನಂಬಿದ ಯುವತಿ ವ್ಯಕ್ತಿ ಹೇಳಿದ ಅರುಂಬಕ್ಕಂನಲ್ಲಿರುವ ಮನೆಯೊಂದಕ್ಕೆ ತಂಗಲು ಹೋದಳು.

ಆದರೆ, ಅಲ್ಲಿಗೆ ತಲುಪಿದ ಬಳಿಕ ಮನೆ ಬಾಗಿಲು ಹಾಕಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆರೋಪಿಯ ಗೆಳತಿ ಶಕೀಲಾ ಕೂಡ ಅಲ್ಲಿಯೇ ಇದ್ದಳು ಎನ್ನಲಾಗಿದೆ.

ನಂತರ ಸಂತ್ರಸ್ತೆ ಯುವತಿಯು ಮೊಬೈಲ್‌ ಮೂಲಕ ಪೊಲೀಸ್‌ರನ್ನು ಸಂಪರ್ಕಿಸಿ, ತನ್ನ ಮೇಲೆ ನಡೆದ ಕೃತ್ಯದ ಬಗ್ಗೆ ದೂರು ನೀಡಿದ್ದಾಳೆ. ಅಂತಯೇ, ಕೊಯಂಬೆಡು ಮಹಿಳಾ ಪೊಲೀಸರು ಬಂದು ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.

ಯುವತಿ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ, ದುರುಳ ಆರೋಪಿಗಳನ್ನು ಬಂಧಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

2 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

2 hours ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

2 hours ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

2 hours ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

2 hours ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

15 hours ago