ಮೈಸೂರು

ಎಚ್.ಡಿ.ಕೋಟೆ ಠಾಣೆ ಪೊಲೀಸ್‌ ಕಾನ್ಸ್‌ಟೇಬಲ್ ಸೈಯದ್‌ ಕಬೀರುದ್ದೀನ್‌ರಿಗೆ ಒಲಿದ ಮುಖ್ಯಮಂತ್ರಿ ಪದಕ

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಮೂಲತಃ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದ ಸೈಯದ್ ಗಯಾಸುದ್ದೀನ್ ಮತ್ತು ಆಸೀಯಾಭಿ ರವರ ಮಗನಾದ ಸೈಯದ್ ಕಬೀರುದ್ದೀನ್ 2009ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡಿದ್ದು, ಹುಣಸೂರು ಪಟ್ಟಣ, ಪಿರಿಯಾಪಟ್ಟಣ, ಸರಗೂರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಈಗ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸೈಯರ್ ಕಬೀರುದ್ದೀನ್‌ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಹಾಗೂ ಪತ್ತೆ ಹಚ್ಚುವಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ೨೦೨೩ನೇ ಸಾಲಿನಲ್ಲಿ ಇವರು ತೋರಿದ ಅಸಾಧಾರಣ ನೈಪುಣ್ಯತೆ, ಪ್ರಾಮಾಣಿಕತೆ ಹಾಗೂ ದಕ್ಷತೆಗಾಗಿ ೨೦೨೩ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಅರ್ಹರಾಗಿದ್ದಾರೆ.

ಇವರು 2023ನೇ ಸಾಲಿನಲ್ಲಿ ಸಾಮಾನ್ಯ ಕಳವು ಮತ್ತು ಮನೆ ಕಳವು ಹಾಗೂ ಕೊಲೆ ಪ್ರಕರಣಗಳಿಗೆ ಸಂಬಂಧಪಟ್ಟ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತನಿಖಾಧಿಕಾರಿಗಳಿಗೆ ಸಹಕರಿಸಿದ್ದಾರೆ.

ಇವರ ಸಾಧನೆಗೆ ಹುಣಸೂರು ವಿಭಾಗ ಡಿವೈಎಸ್ಪಿ ಗೋಪಾಲಕೃಷ್ಣ, ಎಚ್.ಡಿ ಕೋಟೆ ಪಟ್ಟಣ ಠಾಣೆ ಇನ್ಸ್‌ಪೆಕ್ಟರ್ ಗಂಗಾಧರ್ ಈಚೆಗೆ ವರ್ಗಾವಣೆಗೊಂಡ ಶಬ್ಬೀರ್ ಹುಸೇನ್, ಸಬ್ ಇನ್ಸ್ಪೆಕ್ಟರ್ ಗಳಾದ ಚಿಕ್ಕನಾಯಕ, ಸುರೇಶ್ ನಾಯಕ, ಗೌರಿಶಂಕರ್, ಸುಬ್ರಮಣ್ಯ ಹಾಗೂ ಸಿಬ್ಬಂದಿ ಕುಟುಂಬದವರು‌, ಸ್ನೇಹಿತರು ಹಾಗೂ ಹಿತೈಷಿಗಳು ಶುಭ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

7 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

59 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

3 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago