ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು.
ಮೊದಲಿಗೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ ಚಿಕ್ಕಜಾತ್ರೆ ನೆರವೇರಿತು.
ಇಂದು ಮುಂಜಾನೆಯೇ ಚಿನ್ನಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಶ್ರೀಕಂಠೇಶ್ವರ ಸ್ವಾಮಿ ಸೇರಿದಂತೆ ಪಾರ್ವತಿ ಅಮ್ಮನವರು ಹಾಗೂ ಗಣೇಶ ಮತ್ತು ಚಂಡಿಕೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರಗೆ ತಂದು ಹೊರಗಿನ ಪ್ರಾಂಗಣದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು. ಆ ಬಳಿಕ ಸಾವಿರಾರು ಮಂದಿ ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವ ನೋಡಲು ಆಗಮಿಸಿದ್ದ ಸಾವಿರಾರು ಮಂದಿ, ರಥಗಳಿಗೆ ಹಣ್ಣು ಜವನ ಎಸೆದು ತಮ್ಮ ಹರಕೆ ತೀರಿಸಿದರು.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…