ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು.
ಮೊದಲಿಗೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ ಚಿಕ್ಕಜಾತ್ರೆ ನೆರವೇರಿತು.
ಇಂದು ಮುಂಜಾನೆಯೇ ಚಿನ್ನಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಶ್ರೀಕಂಠೇಶ್ವರ ಸ್ವಾಮಿ ಸೇರಿದಂತೆ ಪಾರ್ವತಿ ಅಮ್ಮನವರು ಹಾಗೂ ಗಣೇಶ ಮತ್ತು ಚಂಡಿಕೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರಗೆ ತಂದು ಹೊರಗಿನ ಪ್ರಾಂಗಣದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು. ಆ ಬಳಿಕ ಸಾವಿರಾರು ಮಂದಿ ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವ ನೋಡಲು ಆಗಮಿಸಿದ್ದ ಸಾವಿರಾರು ಮಂದಿ, ರಥಗಳಿಗೆ ಹಣ್ಣು ಜವನ ಎಸೆದು ತಮ್ಮ ಹರಕೆ ತೀರಿಸಿದರು.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…