ಮೈಸೂರು

ಚಿಕ್ಕರಸಿನಕೆರೆ ಕಬ್ಬಿನ ಗದ್ದೆಯಲ್ಲಿ ಸಲಗ ಪ್ರತ್ಯಕ್ಷ

ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ.
ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.
ರೈತ ಶೇಖರ್, ಶಿವಲಿಂಗೇಗೌಡ ಎಂಬವರು ಪೊಲೀಸ್ ಠಾಣೆಗೆ ಮತ್ತು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯು ಗ್ರಾಮಕ್ಕೆ ಪ್ರವೇಶಿಸದಂತೆ ಕ್ರಮ ಕೈಗೊಂಡಿದ್ದಾರೆ.

ಮಳವಳ್ಳಿ ಭಾಗದ ಅರಣ್ಯ ಪ್ರದೇಶದಿಂದ ಈ ಸಲಗ ಬಂದಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ತಿಳಿಸಿದ್ದಾರೆ.
ಈ ಸಲಗವನ್ನು ಸಂಜೆ ೬ ಗಂಟೆಯ ನಂತರ ಅರಣ್ಯ ಪ್ರದೇಶಕ್ಕೆ ಓಡಿಸಲಾಗುವುದು. ಅಲ್ಲಿಯವರೆಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಆಟೋ ಮೂಲಕ ಮೈಕ್ ಅಳವಡಿಸಿಕೊಂಡು ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಆನೆಯನ್ನು ನೋಡಲು ಜನರು ಮುಗಿಬಿದ್ದ ದೃಶ್ಯ ಕಂಡುಬಂದಿತು.

andolana

Recent Posts

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…

1 hour ago

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…

1 hour ago

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…

2 hours ago

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…

2 hours ago

ಕೊಡಗು | ಜಿಲ್ಲಾಸ್ಪತ್ರೆಗೆ ದೀಢೀರ್‌ ಭೇಟಿ ನೀಡಿದ ಶಾಸಕ ಮಂತರ್‌ಗೌಡ

ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ…

2 hours ago

ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌…

4 hours ago