ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ.
ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.
ರೈತ ಶೇಖರ್, ಶಿವಲಿಂಗೇಗೌಡ ಎಂಬವರು ಪೊಲೀಸ್ ಠಾಣೆಗೆ ಮತ್ತು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯು ಗ್ರಾಮಕ್ಕೆ ಪ್ರವೇಶಿಸದಂತೆ ಕ್ರಮ ಕೈಗೊಂಡಿದ್ದಾರೆ.
ಮಳವಳ್ಳಿ ಭಾಗದ ಅರಣ್ಯ ಪ್ರದೇಶದಿಂದ ಈ ಸಲಗ ಬಂದಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ತಿಳಿಸಿದ್ದಾರೆ.
ಈ ಸಲಗವನ್ನು ಸಂಜೆ ೬ ಗಂಟೆಯ ನಂತರ ಅರಣ್ಯ ಪ್ರದೇಶಕ್ಕೆ ಓಡಿಸಲಾಗುವುದು. ಅಲ್ಲಿಯವರೆಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಆಟೋ ಮೂಲಕ ಮೈಕ್ ಅಳವಡಿಸಿಕೊಂಡು ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಆನೆಯನ್ನು ನೋಡಲು ಜನರು ಮುಗಿಬಿದ್ದ ದೃಶ್ಯ ಕಂಡುಬಂದಿತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…