Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ.

ದೊಡ್ಡಹೆಜ್ಜೂರಿನ ಸುದರ್ಶನ್ ಹಾಗೂ ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿರುವ ದುರ್ದೈವಿ.

ಅಜ್ಜಿಯ ಜೊತೆ ಆಟವಾಡುತ್ತಿದ್ದ ಮಗು, ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವು ನುಂಗಿ ತೀವ್ರ ಅಸ್ವಸ್ಥಗೊಂಡಿತ್ತು.

ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

Tags:
error: Content is protected !!