ಮೈಸೂರು: ಆಕ್ಸಿಜನ್ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್ ದಂಪತಿಯ ಮಗು ಸಾವನ್ನಪ್ಪಿದೆ.
ಮಾರ್ಚ್.17ರಂದು ರತ್ನಮ್ಮಗೆ ಹೆರಿಗೆಯಾಗಿದ್ದು, ಹೆರಿಗೆಯಾದ ಬಳಿಕ ಕ್ಷಣಾರ್ಧದಲ್ಲೇ ಮಗು ನೀಲಿ ಬಣ್ಣಕ್ಕೆ ತಿರುಗಿದೆ.
ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆ ಸಿಬ್ಬಂದಿ ಮುಂದಾಗಿದ್ದಾರೆ.
ಈ ವೇಳೆ ಅಲ್ಲಿಂದ ಮೈಸೂರಿನ ದೊಡ್ಡಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಮಗುವನ್ನು ರವಾನಿಸಲು ಮುಂದಾಗಿದ್ದಾರೆ. ಆಕ್ಸಿಜನ್ ಕೊರತೆ ಇದ್ದ ಹಿನ್ನೆಲೆಯಲ್ಲಿ ಮಗು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ.
ಮಗು ಸಾವನ್ನಪ್ಪುತ್ತಿದ್ದಂತೆ ರೊಚ್ಚಿಗೆದ್ದ ಪೋಷಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ ಮಾಡಿದ್ದು, ಮಗು ಸಾವಿಗೆ ನೀವೇ ಕಾರಣ ಎಂದು ಕಿಡಿಕಾರಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…