ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ ವ್ಯಕ್ತಪಡಿಸಿದರು.
ಮಂಗಳವಾರ ನಗರದ ತಾಯಿ ಮತ್ತು ಮಕ್ಕಳ ತುಳಸಿದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಸೌಲಭ್ಯಗಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವಿಂದು 21ನೇ ಶತಮಾನದಲ್ಲಿದ್ದರೂ ಇನ್ನೂ ಬಾಲ್ಯ ವಿವಾಹ ಪದ್ಧತಿ ನಿಲ್ಲದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಬಡತನ,ಅರಿವಿನ ಕೊರತೆಯಿಂದ ಬಾಲ್ಯ ವಿವಾಹ: ಬಡತನ ಮತ್ತು ಅರಿವಿನ ಕೊರತೆಯೇ ಬಾಲ್ಯ ವಿವಾಹಕ್ಕೆ ಕಾರಣ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರದ ಜೊತೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರೀತಿ, ಪ್ರೇಮದ ಬಲೆಗೆ ಬೀಳುವುದನ್ನು ತಪ್ಪಿಸಲು ಬಾಲ್ಯವಿವಾಹ ವಾಗುವುದಕ್ಕೆ ಕಾರಣ ಎಂದು ವರದಿಗಳು ಹೇಳಿತ್ತಿವೆ. ನಮ್ಮ ಜನ ಎಲ್ಲಿವರಗೆ ಅರಿವು ಪಡೆಯುವುದಿಲ್ಲವೋ ಅಲ್ಲಿಯವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರುತ್ತವೆ ಎಂದು ಬೇಸರಿಸಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…