ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.
ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.
ಇಂತಹ ಉದಾತ್ತ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕು, ಇದಕ್ಕಾಗಿ ನಿತ್ಯ ಮನೆಗಳಲ್ಲಿ ಶರಣರ ವಚನ, ದಾಸರ ಕೀರ್ತನೆಯನ್ನು ಮಕ್ಕಳಿಗೆ ಕಲಿಸಬೇಕು. ವಚನಗಳಲ್ಲಿನ ಅನುಭಾವ ಉತ್ತಮ ಪ್ರಜೆಗಳನ್ನು ರೂಪಿಸುತ್ತದೆ ಎಂದರು.
ಸುತ್ತೂರು ಸಂಸ್ಥಾನಕ್ಕೆ ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದ್ದು, ಆದಿ ಶಿವರಾತ್ರೀಶ್ವರ ಶಿವಯೋಗಿಗಳ ಪರಂಪರೆ ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾದ್ದು, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅನ್ನ, ಅಕ್ಷರ, ಆಶ್ರಯ ನೀಡಿ ಮಾಡುತ್ತಿರುವ ತ್ರಿವಿಧ ದಾಸೋಹ ಅನುಪಮವಾದ್ದು ಎಂದರು.
ಶಿಕ್ಷಣ, ಆರೋಗ್ಯ, ಸಮಾಜಸೇವೆ, ಧಾರ್ಮಿಕ, ಆಧ್ಯಾತ್ಮಿಕ ಲೋಕಕ್ಕೆ ವೀರಶೈವ ಲಿಂಗಾಯತ ಮಠಗಳು ನೀಡಿರುವ ಕೊಡುಗೆ ಸ್ಮರಿಸಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಮಠಾಧಿಪತಿಗಳ ನೇತೃತ್ವದಲ್ಲಿ ತಾವೂ ಕೂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಅದಕ್ಕೆ ಮನ್ನಣೆ ನೀಡಿ ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.
ಸಮಾರಂಭದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶಾಸಕರಾದ ಗಣೇಶ್ ಪ್ರಸಾದ್, ದೇವೇಂದ್ರಪ್ಪ, ಮಾಜಿ ಶಾಸಕ ಡಾ. ಯತೀಂದ್ರ, ಮಾಜಿ ಸಚಿವರಾದ ಗೀತಾ ಮಹದೇವ ಪ್ರಸಾದ್ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…