ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.
ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.
ಇಂತಹ ಉದಾತ್ತ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕು, ಇದಕ್ಕಾಗಿ ನಿತ್ಯ ಮನೆಗಳಲ್ಲಿ ಶರಣರ ವಚನ, ದಾಸರ ಕೀರ್ತನೆಯನ್ನು ಮಕ್ಕಳಿಗೆ ಕಲಿಸಬೇಕು. ವಚನಗಳಲ್ಲಿನ ಅನುಭಾವ ಉತ್ತಮ ಪ್ರಜೆಗಳನ್ನು ರೂಪಿಸುತ್ತದೆ ಎಂದರು.
ಸುತ್ತೂರು ಸಂಸ್ಥಾನಕ್ಕೆ ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದ್ದು, ಆದಿ ಶಿವರಾತ್ರೀಶ್ವರ ಶಿವಯೋಗಿಗಳ ಪರಂಪರೆ ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾದ್ದು, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅನ್ನ, ಅಕ್ಷರ, ಆಶ್ರಯ ನೀಡಿ ಮಾಡುತ್ತಿರುವ ತ್ರಿವಿಧ ದಾಸೋಹ ಅನುಪಮವಾದ್ದು ಎಂದರು.
ಶಿಕ್ಷಣ, ಆರೋಗ್ಯ, ಸಮಾಜಸೇವೆ, ಧಾರ್ಮಿಕ, ಆಧ್ಯಾತ್ಮಿಕ ಲೋಕಕ್ಕೆ ವೀರಶೈವ ಲಿಂಗಾಯತ ಮಠಗಳು ನೀಡಿರುವ ಕೊಡುಗೆ ಸ್ಮರಿಸಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಮಠಾಧಿಪತಿಗಳ ನೇತೃತ್ವದಲ್ಲಿ ತಾವೂ ಕೂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಅದಕ್ಕೆ ಮನ್ನಣೆ ನೀಡಿ ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.
ಸಮಾರಂಭದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶಾಸಕರಾದ ಗಣೇಶ್ ಪ್ರಸಾದ್, ದೇವೇಂದ್ರಪ್ಪ, ಮಾಜಿ ಶಾಸಕ ಡಾ. ಯತೀಂದ್ರ, ಮಾಜಿ ಸಚಿವರಾದ ಗೀತಾ ಮಹದೇವ ಪ್ರಸಾದ್ ಮತ್ತಿತರರು ಭಾಗಿಯಾಗಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…