ಮೈಸೂರು

ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಈಶ್ವರ ಖಂಡ್ರೆ

ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.

ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.

ಇಂತಹ ಉದಾತ್ತ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕು, ಇದಕ್ಕಾಗಿ ನಿತ್ಯ ಮನೆಗಳಲ್ಲಿ ಶರಣರ ವಚನ, ದಾಸರ ಕೀರ್ತನೆಯನ್ನು ಮಕ್ಕಳಿಗೆ ಕಲಿಸಬೇಕು. ವಚನಗಳಲ್ಲಿನ ಅನುಭಾವ ಉತ್ತಮ ಪ್ರಜೆಗಳನ್ನು ರೂಪಿಸುತ್ತದೆ ಎಂದರು.

ಸುತ್ತೂರು ಸಂಸ್ಥಾನಕ್ಕೆ ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದ್ದು, ಆದಿ ಶಿವರಾತ್ರೀಶ್ವರ ಶಿವಯೋಗಿಗಳ ಪರಂಪರೆ ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾದ್ದು, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅನ್ನ, ಅಕ್ಷರ, ಆಶ್ರಯ ನೀಡಿ ಮಾಡುತ್ತಿರುವ ತ್ರಿವಿಧ ದಾಸೋಹ ಅನುಪಮವಾದ್ದು ಎಂದರು.

ಶಿಕ್ಷಣ, ಆರೋಗ್ಯ, ಸಮಾಜಸೇವೆ, ಧಾರ್ಮಿಕ, ಆಧ್ಯಾತ್ಮಿಕ ಲೋಕಕ್ಕೆ ವೀರಶೈವ ಲಿಂಗಾಯತ ಮಠಗಳು ನೀಡಿರುವ ಕೊಡುಗೆ ಸ್ಮರಿಸಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಮಠಾಧಿಪತಿಗಳ ನೇತೃತ್ವದಲ್ಲಿ ತಾವೂ ಕೂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ಅದಕ್ಕೆ ಮನ್ನಣೆ ನೀಡಿ ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.

ಸಮಾರಂಭದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶಾಸಕರಾದ ಗಣೇಶ್ ಪ್ರಸಾದ್, ದೇವೇಂದ್ರಪ್ಪ, ಮಾಜಿ ಶಾಸಕ ಡಾ. ಯತೀಂದ್ರ, ಮಾಜಿ ಸಚಿವರಾದ ಗೀತಾ ಮಹದೇವ ಪ್ರಸಾದ್ ಮತ್ತಿತರರು ಭಾಗಿಯಾಗಿದ್ದರು.

andolanait

Recent Posts

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

35 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

1 hour ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

3 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

3 hours ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

3 hours ago