ಮೈಸೂರು

ಮಕ್ಕಳ ದಿನಾಚರಣೆ : ವಸ್ತುಪ್ರದರ್ಶನಕ್ಕೆ ಲಗ್ಗೆ ಇಟ್ಟ ಮಕ್ಕಳ ; ಸಂಭ್ರಮ ಜೋರು

ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು.

ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು ಸವಿದ ಮಕ್ಕಳು, ಬಾತ್, ಮೊಸರನ್ನ ಸೇವಿಸಿ ಹೊಟ್ಟೆ ತುಂಬಿಸಿಕೊಂಡರು…, ಜೊತೆಗೆ ವಿವಿಧ ಆಟೋಟದಲ್ಲಿ ಪಾಲ್ಗೊಂಡು ನಕ್ಕು ನಲಿದುದ್ದಲ್ಲದೆ ಬಹುಮಾನವನ್ನೂ ಮನೆಗೆ ಕೊಂಡೊಯ್ದರು….ಇದು ಶುಕ್ರವಾರ ವಸ್ತುಪ್ರದರ್ಶನ ಆವರಣದಲ್ಲಿ ಕಂಡುಬಂದ ದೃಷ್ಯಾವಳಿಗಳು. ಇಷ್ಟು ವರ್ಷಗಳ ಕಾಲ ಮಕ್ಕಳ ದಿನಾಚರಣೆ ಅಂಗವಾಗಿ ವಸ್ತುಪ್ರದರ್ಶನ ಆವರಣಕ್ಕೆ ಉಚಿತ ಪ್ರವೇಶ ಮಾತ್ರವಿತ್ತು.

ಆದರೆ ಕಳೆದ ವರ್ಷದಿಂದ ಮಕ್ಕಳು ವಸ್ತು ಪ್ರದರ್ಶನ ಆವರಣದಲ್ಲಿ ಊಟ, ತಿಂಡಿ, ಆಟೋಟಗಳ ಸಮೇತ ಇಡೀ ದಿನ ಸಂತಸ, ಉಲ್ಲಾಸದಿಂದ ಕಾಲ ಕಳೆಯುವಂತೆ ಅಧ್ಯಕ್ಷ ಅಯೂಬ್‌ಖಾನ್ ಏರ್ಪಾಡು ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲಾಡಳಿತದೊಂದಿಗೆ ವಸ್ತುಪ್ರದರ್ಶನ ಪ್ರಾಧಿಕಾರ ಇಂತಹ ಒಂದು ಸುಂದರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಮೈಸೂರು ನಗರ ಹಾಗೂ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಸುಮಾರು ೩ ಸಾವಿರ ಮಕ್ಕಳನ್ನು ಆವರಣಕ್ಕೆ ಬರಮಾಡಿಕೊಳ್ಳಲಾಗಿತ್ತು.

ಇದನ್ನು ಓದಿ: GRS ಯಂತ್ರದಲ್ಲಿ ಲೋಪ ; ವ್ಯಕ್ತಿಯೊಬ್ಬರ ಎರಡು ಬೆರಳು ಕಟ್ : ಎಫ್‌ಐಆರ್‌ ದಾಖಲು

ಬೆಳಿಗ್ಗೆ ೧೦ ಗಂಟೆಗೆ ಮಕ್ಕಳಿಗಾಗಿ ವಸ್ತು ಪ್ರದರ್ಶನ ಆವರಣವನ್ನು ಮುಕ್ತಗೊಳಿಸಲಾಗಿತ್ತು. ವಿವಿಧ ಶಾಲೆಗಳಿಗೆ ಮೊದಲೇ ಮಾಹಿತಿ ನೀಡಿದ್ದರ ಪರಿಣಾಮ ೧೨ ಗಂಟೆ ನಂತರ ಮಕ್ಕಳಿ ಸಾಗರೋಪಾದಿಯಲ್ಲಿ ವಸ್ತುಪ್ರದರ್ಶನ ಆವರಣಕ್ಕೆ ಲಗ್ಗೆ ಇಟ್ಟರು.

ರಂಗಾಯಣದ ಮಾಜಿ ನಿರ್ದೇಶಕ ಪ್ರಸನ್ನ ಹೆಗ್ಗೋಡು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮೈಮ್ ರಮೇಶ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್, ರಘುರಾಜೇ ಅರಸ್ ಅವರ ಹಾಜರಿಯಲ್ಲಿ ಕೇವಲ ೧೦ ನಿಮಿಷಗಳಲ್ಲಿ ವೇದಿಕೆ ಕಾರ್ಯಕ್ರಮ ಪೂರ್ಣಗೊಂಡಿತು. ನಂತರ ಅತಿಥಿಗಳೂ ಕೂಡ ಮಕ್ಕಳ ಗುಂಪಿನಲ್ಲಿ ಸೇರಿಕೊಂಡು ತಾವು ಮಕ್ಕಳಂತೆಯೇ ಸಂತಸಪಟ್ಟರು.

ನಂತರ ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು, ವೇಶಭೂಷಣ ಸ್ಪರ್ಧೆ, ಹಾಡುಗಾರಿಕೆ, ನೃತ್ಯ, ಆಶುಭಾಷಣ, ಚರ್ಚಾ ಸ್ಪರ್ಧೆಗಳು ನಡೆದವು. ಎಲ್ಲಾ ಸ್ಪರ್ಧೆಗಳಲ್ಲಿಯೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದುದು ವಿಶೇಷ.

 

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago