ಮೈಸೂರು

ಮಕ್ಕಳ ದಿನಾಚರಣೆ : ವಸ್ತುಪ್ರದರ್ಶನಕ್ಕೆ ಲಗ್ಗೆ ಇಟ್ಟ ಮಕ್ಕಳ ; ಸಂಭ್ರಮ ಜೋರು

ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು.

ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು ಸವಿದ ಮಕ್ಕಳು, ಬಾತ್, ಮೊಸರನ್ನ ಸೇವಿಸಿ ಹೊಟ್ಟೆ ತುಂಬಿಸಿಕೊಂಡರು…, ಜೊತೆಗೆ ವಿವಿಧ ಆಟೋಟದಲ್ಲಿ ಪಾಲ್ಗೊಂಡು ನಕ್ಕು ನಲಿದುದ್ದಲ್ಲದೆ ಬಹುಮಾನವನ್ನೂ ಮನೆಗೆ ಕೊಂಡೊಯ್ದರು….ಇದು ಶುಕ್ರವಾರ ವಸ್ತುಪ್ರದರ್ಶನ ಆವರಣದಲ್ಲಿ ಕಂಡುಬಂದ ದೃಷ್ಯಾವಳಿಗಳು. ಇಷ್ಟು ವರ್ಷಗಳ ಕಾಲ ಮಕ್ಕಳ ದಿನಾಚರಣೆ ಅಂಗವಾಗಿ ವಸ್ತುಪ್ರದರ್ಶನ ಆವರಣಕ್ಕೆ ಉಚಿತ ಪ್ರವೇಶ ಮಾತ್ರವಿತ್ತು.

ಆದರೆ ಕಳೆದ ವರ್ಷದಿಂದ ಮಕ್ಕಳು ವಸ್ತು ಪ್ರದರ್ಶನ ಆವರಣದಲ್ಲಿ ಊಟ, ತಿಂಡಿ, ಆಟೋಟಗಳ ಸಮೇತ ಇಡೀ ದಿನ ಸಂತಸ, ಉಲ್ಲಾಸದಿಂದ ಕಾಲ ಕಳೆಯುವಂತೆ ಅಧ್ಯಕ್ಷ ಅಯೂಬ್‌ಖಾನ್ ಏರ್ಪಾಡು ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲಾಡಳಿತದೊಂದಿಗೆ ವಸ್ತುಪ್ರದರ್ಶನ ಪ್ರಾಧಿಕಾರ ಇಂತಹ ಒಂದು ಸುಂದರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಮೈಸೂರು ನಗರ ಹಾಗೂ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಸುಮಾರು ೩ ಸಾವಿರ ಮಕ್ಕಳನ್ನು ಆವರಣಕ್ಕೆ ಬರಮಾಡಿಕೊಳ್ಳಲಾಗಿತ್ತು.

ಇದನ್ನು ಓದಿ: GRS ಯಂತ್ರದಲ್ಲಿ ಲೋಪ ; ವ್ಯಕ್ತಿಯೊಬ್ಬರ ಎರಡು ಬೆರಳು ಕಟ್ : ಎಫ್‌ಐಆರ್‌ ದಾಖಲು

ಬೆಳಿಗ್ಗೆ ೧೦ ಗಂಟೆಗೆ ಮಕ್ಕಳಿಗಾಗಿ ವಸ್ತು ಪ್ರದರ್ಶನ ಆವರಣವನ್ನು ಮುಕ್ತಗೊಳಿಸಲಾಗಿತ್ತು. ವಿವಿಧ ಶಾಲೆಗಳಿಗೆ ಮೊದಲೇ ಮಾಹಿತಿ ನೀಡಿದ್ದರ ಪರಿಣಾಮ ೧೨ ಗಂಟೆ ನಂತರ ಮಕ್ಕಳಿ ಸಾಗರೋಪಾದಿಯಲ್ಲಿ ವಸ್ತುಪ್ರದರ್ಶನ ಆವರಣಕ್ಕೆ ಲಗ್ಗೆ ಇಟ್ಟರು.

ರಂಗಾಯಣದ ಮಾಜಿ ನಿರ್ದೇಶಕ ಪ್ರಸನ್ನ ಹೆಗ್ಗೋಡು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮೈಮ್ ರಮೇಶ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್, ರಘುರಾಜೇ ಅರಸ್ ಅವರ ಹಾಜರಿಯಲ್ಲಿ ಕೇವಲ ೧೦ ನಿಮಿಷಗಳಲ್ಲಿ ವೇದಿಕೆ ಕಾರ್ಯಕ್ರಮ ಪೂರ್ಣಗೊಂಡಿತು. ನಂತರ ಅತಿಥಿಗಳೂ ಕೂಡ ಮಕ್ಕಳ ಗುಂಪಿನಲ್ಲಿ ಸೇರಿಕೊಂಡು ತಾವು ಮಕ್ಕಳಂತೆಯೇ ಸಂತಸಪಟ್ಟರು.

ನಂತರ ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು, ವೇಶಭೂಷಣ ಸ್ಪರ್ಧೆ, ಹಾಡುಗಾರಿಕೆ, ನೃತ್ಯ, ಆಶುಭಾಷಣ, ಚರ್ಚಾ ಸ್ಪರ್ಧೆಗಳು ನಡೆದವು. ಎಲ್ಲಾ ಸ್ಪರ್ಧೆಗಳಲ್ಲಿಯೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದುದು ವಿಶೇಷ.

 

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

15 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

16 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

17 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

18 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

18 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

19 hours ago