ಮೈಸೂರು : ಸ್ಕೂಲ್ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ…..
ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು.
ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ ಪ್ರಸಕ್ತ ಸಾಲಿನ ಚಿಣ್ಣರ ಮೇಳೆ ನಡೆಯುತ್ತಿದೆ. ಏ.14 ರಂದು ಪ್ರಾರಂಭವಾಗಿರುವ ಮೇಳವು ಮೇ 10 ರವರಗೆ ನಡೆಯಲಿದೆ. ಇಲ್ಲಿ 250-ರಿಂದ 300 ಮಕ್ಕಳು ಭಾಗಿಯಾಗಿದ್ದು, ಮರೆಯಾಗುತ್ತಿರುವ ದೇಶೀಯ ಆಟೋಟಗಳಲ್ಲಿ ಭಾಗವಹಿಸಿ ನಲಿಯುತ್ತಿದ್ದಾರೆ.
6 ರಿಂದ 15 ವರ್ಷದ ವಯೋಮಿತಿಯ ಮಕ್ಕಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ತನಕ ದೇಶೀಯ ಲಲಿತಾ ಕಲೆಗಳ ಕಲಿಕೆಯಲ್ಲಿ ಪಾಲ್ಗೊಂಡು ಎಂಜಾಯ್ ಮಾಡುತ್ತಿದ್ದಾರೆ. ಹಸು ಹುಲಿ ಆಟ, ಲಗೋರಿ, ನಾಟಕ, ಹಾಡು, ನೃತ್ಯ ಗಳಲ್ಲಿ ಭಾಗಿಯಾಗಿ ನಕ್ಕಿ ನಲಿಯುತ್ತಿದ್ದಾರೆ.
ಮನೆಗೆ ಹೋಗೋದಕ್ಕೆ ಮನಸ್ಸು ಬರುತ್ತಿಲ್ಲ. ಇಲ್ಲೇ ಇರಬೇಕು ಎನಿಸುತ್ತದೆ.. ಶಾಲೆಗೆ ಹೋಗೋಕೆ ಬೇಜಾರು. ಇಲ್ಲೇ ಇದ್ದು ಬಿಡೋಣ ಅನಿಸುತ್ತೆ. ಸ್ಕೂಲ್ ಗಿಂತ ಇಲ್ಲೇ ಇರೋಕೆ ಇಷ್ಟ ಎಂದು ಮಕ್ಕಳು ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.
ಮೇಳದಲ್ಲಿ ಹಾಡು, ನಾಟಕ, ಕ್ರೀಡಾ ಕ್ಷೇತ್ರದಲ್ಲಿ ನುರಿತ ತಜ್ಞರಿಂದ ಮಕ್ಕಳಿಗೆ ತರಬೇತಿ ನಡೆಯುತ್ತಿದೆ. ಮೈಸೂರು ನಗರ, ಗ್ರಾಮೀಣ ಭಾಗದಿಂದಲೂ ಮಕ್ಕಳು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗಿಯಾಗಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…