ಮೈಸೂರು

ಚಿಣ್ಣರ ಮೇಳ ; ನಕ್ಕು ನಲಿಯುತ್ತಿರುವ ಪುಟಾಣಿಗಳು

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ…..

ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು.

ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ ಪ್ರಸಕ್ತ ಸಾಲಿನ ಚಿಣ್ಣರ ಮೇಳೆ ನಡೆಯುತ್ತಿದೆ. ಏ.14 ರಂದು ಪ್ರಾರಂಭವಾಗಿರುವ ಮೇಳವು ಮೇ 10 ರವರಗೆ ನಡೆಯಲಿದೆ. ಇಲ್ಲಿ 250-ರಿಂದ 300 ಮಕ್ಕಳು ಭಾಗಿಯಾಗಿದ್ದು, ಮರೆಯಾಗುತ್ತಿರುವ ದೇಶೀಯ ಆಟೋಟಗಳಲ್ಲಿ ಭಾಗವಹಿಸಿ ನಲಿಯುತ್ತಿದ್ದಾರೆ.

6 ರಿಂದ 15 ವರ್ಷದ ವಯೋಮಿತಿಯ ಮಕ್ಕಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ತನಕ ದೇಶೀಯ ಲಲಿತಾ ಕಲೆಗಳ ಕಲಿಕೆಯಲ್ಲಿ ಪಾಲ್ಗೊಂಡು ಎಂಜಾಯ್ ಮಾಡುತ್ತಿದ್ದಾರೆ. ಹಸು ಹುಲಿ ಆಟ, ಲಗೋರಿ, ನಾಟಕ, ಹಾಡು, ನೃತ್ಯ ಗಳಲ್ಲಿ ಭಾಗಿಯಾಗಿ ನಕ್ಕಿ ನಲಿಯುತ್ತಿದ್ದಾರೆ.

ಮನೆಗೆ ಹೋಗೋದಕ್ಕೆ ಮನಸ್ಸು ಬರುತ್ತಿಲ್ಲ. ಇಲ್ಲೇ ಇರಬೇಕು ಎನಿಸುತ್ತದೆ.. ಶಾಲೆಗೆ ಹೋಗೋಕೆ ಬೇಜಾರು. ಇಲ್ಲೇ ಇದ್ದು ಬಿಡೋಣ ಅನಿಸುತ್ತೆ. ಸ್ಕೂಲ್ ಗಿಂತ ಇಲ್ಲೇ ಇರೋಕೆ ಇಷ್ಟ ಎಂದು ಮಕ್ಕಳು ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಮೇಳದಲ್ಲಿ ಹಾಡು, ನಾಟಕ, ಕ್ರೀಡಾ ಕ್ಷೇತ್ರದಲ್ಲಿ ನುರಿತ ತಜ್ಞರಿಂದ ಮಕ್ಕಳಿಗೆ ತರಬೇತಿ ನಡೆಯುತ್ತಿದೆ. ಮೈಸೂರು ನಗರ, ಗ್ರಾಮೀಣ ಭಾಗದಿಂದಲೂ ಮಕ್ಕಳು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

2 hours ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

2 hours ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

4 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

5 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

9 hours ago