Categories: ಮೈಸೂರು

ಮೈಸೂರು | ಚಿಣ್ಣರ ಮೇಳದಲ್ಲಿ ಗಮನ ಸೆಳೆದ ಮಕ್ಕಳ ಸಂತೆ

ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ…

ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ ಸಂತೆಯಲ್ಲಿ ಅಕ್ಷರಶಃ ಪುಟಾಣಿಗಳು ತಾವೇ ತಯಾರಿಸಿದ ಪದಾರ್ಥಗಳನ್ನು ಸಂತೆಯಲ್ಲಿಟ್ಟು ಮಾರಾಟ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಚುರುಮುರಿ, ಹುರಿದ ಮಂಡಕ್ಕಿ, ಕೊಬ್ಬರಿ ಮಿಠಾಯಿ, ಚಕ್ಕುಲಿ ಕೋಡುಬಳೆ, ಬಿಡಿಸಿದ ಹಲಸಿನ ತೊಳೆ, ಸಣ್ಣಗೆ ಕುಯ್ಡು ಉಪ್ಪುಖಾರ ಸೇರಿಸಿದ ತೋತಾಪುರಿ ಮಾವು ಹೀಗೆ ನಾನಾ ಬಗೆಯ ತಿನಿಸುಗಳು ಸಂತೆಯಲ್ಲಿದ್ದವು. ಬಿಸಿಲಿನಿಂದ ಬಳಲಿದವರಿಗೆ ಮಜ್ಜಿಗೆ, ನಿಂಬೆ ಷರಬತ್ತು, ಖರ್ಬೂಜ ಜ್ಯೂಸ್ ಸಹಿತ ವಿವಿಧ ಪಾನೀ ಯಗಳನ್ನು ಸಂತೆಯಲ್ಲಿ ಇಡಲಾಗಿತ್ತು.

ಕೆಲವರು ಮನೆಯಿಂದಲೇ ರವೆ ಉಂಡೆ, ಚಕ್ಕುಲಿ, ಕುಕ್ಕೀಸ್ ಮೊದಲಾದ ತಿನಿಸುಗಳನ್ನು ಸಿದ್ಧಪಡಿಸಿ ಕೊಂಡು ತಂದಿದ್ದರು. ಇನ್ನೂ ಕೆಲವರು ಸ್ಥಳದಲ್ಲೇ ಒಂದಿಷ್ಟು ತಿನಿಸು ಸಿದ್ಧಪಡಿಸಿ ಸಂತೆಯಲ್ಲಿಟ್ಟರು. ಮಕ್ಕಳು ವ್ಯಾಪಾರಿಗಳಂತೆಯೇ ಕೂಗುತ್ತಾ, ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡಿದರು. ಪೋಷಕರೂ ಮಕ್ಕಳಿಗೆ ಸಾಥ್ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

1 hour ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

1 hour ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

1 hour ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

2 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago