ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ…
ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ ಸಂತೆಯಲ್ಲಿ ಅಕ್ಷರಶಃ ಪುಟಾಣಿಗಳು ತಾವೇ ತಯಾರಿಸಿದ ಪದಾರ್ಥಗಳನ್ನು ಸಂತೆಯಲ್ಲಿಟ್ಟು ಮಾರಾಟ ಮಾಡಿ ಸಾರ್ವಜನಿಕರ ಗಮನ ಸೆಳೆದರು.
ಚುರುಮುರಿ, ಹುರಿದ ಮಂಡಕ್ಕಿ, ಕೊಬ್ಬರಿ ಮಿಠಾಯಿ, ಚಕ್ಕುಲಿ ಕೋಡುಬಳೆ, ಬಿಡಿಸಿದ ಹಲಸಿನ ತೊಳೆ, ಸಣ್ಣಗೆ ಕುಯ್ಡು ಉಪ್ಪುಖಾರ ಸೇರಿಸಿದ ತೋತಾಪುರಿ ಮಾವು ಹೀಗೆ ನಾನಾ ಬಗೆಯ ತಿನಿಸುಗಳು ಸಂತೆಯಲ್ಲಿದ್ದವು. ಬಿಸಿಲಿನಿಂದ ಬಳಲಿದವರಿಗೆ ಮಜ್ಜಿಗೆ, ನಿಂಬೆ ಷರಬತ್ತು, ಖರ್ಬೂಜ ಜ್ಯೂಸ್ ಸಹಿತ ವಿವಿಧ ಪಾನೀ ಯಗಳನ್ನು ಸಂತೆಯಲ್ಲಿ ಇಡಲಾಗಿತ್ತು.
ಕೆಲವರು ಮನೆಯಿಂದಲೇ ರವೆ ಉಂಡೆ, ಚಕ್ಕುಲಿ, ಕುಕ್ಕೀಸ್ ಮೊದಲಾದ ತಿನಿಸುಗಳನ್ನು ಸಿದ್ಧಪಡಿಸಿ ಕೊಂಡು ತಂದಿದ್ದರು. ಇನ್ನೂ ಕೆಲವರು ಸ್ಥಳದಲ್ಲೇ ಒಂದಿಷ್ಟು ತಿನಿಸು ಸಿದ್ಧಪಡಿಸಿ ಸಂತೆಯಲ್ಲಿಟ್ಟರು. ಮಕ್ಕಳು ವ್ಯಾಪಾರಿಗಳಂತೆಯೇ ಕೂಗುತ್ತಾ, ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡಿದರು. ಪೋಷಕರೂ ಮಕ್ಕಳಿಗೆ ಸಾಥ್ ನೀಡಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…