Categories: ಮೈಸೂರು

ಮೈಸೂರು | ಚಿಣ್ಣರ ಮೇಳದಲ್ಲಿ ಗಮನ ಸೆಳೆದ ಮಕ್ಕಳ ಸಂತೆ

ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ…

ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ ಸಂತೆಯಲ್ಲಿ ಅಕ್ಷರಶಃ ಪುಟಾಣಿಗಳು ತಾವೇ ತಯಾರಿಸಿದ ಪದಾರ್ಥಗಳನ್ನು ಸಂತೆಯಲ್ಲಿಟ್ಟು ಮಾರಾಟ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಚುರುಮುರಿ, ಹುರಿದ ಮಂಡಕ್ಕಿ, ಕೊಬ್ಬರಿ ಮಿಠಾಯಿ, ಚಕ್ಕುಲಿ ಕೋಡುಬಳೆ, ಬಿಡಿಸಿದ ಹಲಸಿನ ತೊಳೆ, ಸಣ್ಣಗೆ ಕುಯ್ಡು ಉಪ್ಪುಖಾರ ಸೇರಿಸಿದ ತೋತಾಪುರಿ ಮಾವು ಹೀಗೆ ನಾನಾ ಬಗೆಯ ತಿನಿಸುಗಳು ಸಂತೆಯಲ್ಲಿದ್ದವು. ಬಿಸಿಲಿನಿಂದ ಬಳಲಿದವರಿಗೆ ಮಜ್ಜಿಗೆ, ನಿಂಬೆ ಷರಬತ್ತು, ಖರ್ಬೂಜ ಜ್ಯೂಸ್ ಸಹಿತ ವಿವಿಧ ಪಾನೀ ಯಗಳನ್ನು ಸಂತೆಯಲ್ಲಿ ಇಡಲಾಗಿತ್ತು.

ಕೆಲವರು ಮನೆಯಿಂದಲೇ ರವೆ ಉಂಡೆ, ಚಕ್ಕುಲಿ, ಕುಕ್ಕೀಸ್ ಮೊದಲಾದ ತಿನಿಸುಗಳನ್ನು ಸಿದ್ಧಪಡಿಸಿ ಕೊಂಡು ತಂದಿದ್ದರು. ಇನ್ನೂ ಕೆಲವರು ಸ್ಥಳದಲ್ಲೇ ಒಂದಿಷ್ಟು ತಿನಿಸು ಸಿದ್ಧಪಡಿಸಿ ಸಂತೆಯಲ್ಲಿಟ್ಟರು. ಮಕ್ಕಳು ವ್ಯಾಪಾರಿಗಳಂತೆಯೇ ಕೂಗುತ್ತಾ, ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡಿದರು. ಪೋಷಕರೂ ಮಕ್ಕಳಿಗೆ ಸಾಥ್ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

2 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

2 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

4 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

4 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago