ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ…
ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ ಸಂತೆಯಲ್ಲಿ ಅಕ್ಷರಶಃ ಪುಟಾಣಿಗಳು ತಾವೇ ತಯಾರಿಸಿದ ಪದಾರ್ಥಗಳನ್ನು ಸಂತೆಯಲ್ಲಿಟ್ಟು ಮಾರಾಟ ಮಾಡಿ ಸಾರ್ವಜನಿಕರ ಗಮನ ಸೆಳೆದರು.
ಚುರುಮುರಿ, ಹುರಿದ ಮಂಡಕ್ಕಿ, ಕೊಬ್ಬರಿ ಮಿಠಾಯಿ, ಚಕ್ಕುಲಿ ಕೋಡುಬಳೆ, ಬಿಡಿಸಿದ ಹಲಸಿನ ತೊಳೆ, ಸಣ್ಣಗೆ ಕುಯ್ಡು ಉಪ್ಪುಖಾರ ಸೇರಿಸಿದ ತೋತಾಪುರಿ ಮಾವು ಹೀಗೆ ನಾನಾ ಬಗೆಯ ತಿನಿಸುಗಳು ಸಂತೆಯಲ್ಲಿದ್ದವು. ಬಿಸಿಲಿನಿಂದ ಬಳಲಿದವರಿಗೆ ಮಜ್ಜಿಗೆ, ನಿಂಬೆ ಷರಬತ್ತು, ಖರ್ಬೂಜ ಜ್ಯೂಸ್ ಸಹಿತ ವಿವಿಧ ಪಾನೀ ಯಗಳನ್ನು ಸಂತೆಯಲ್ಲಿ ಇಡಲಾಗಿತ್ತು.
ಕೆಲವರು ಮನೆಯಿಂದಲೇ ರವೆ ಉಂಡೆ, ಚಕ್ಕುಲಿ, ಕುಕ್ಕೀಸ್ ಮೊದಲಾದ ತಿನಿಸುಗಳನ್ನು ಸಿದ್ಧಪಡಿಸಿ ಕೊಂಡು ತಂದಿದ್ದರು. ಇನ್ನೂ ಕೆಲವರು ಸ್ಥಳದಲ್ಲೇ ಒಂದಿಷ್ಟು ತಿನಿಸು ಸಿದ್ಧಪಡಿಸಿ ಸಂತೆಯಲ್ಲಿಟ್ಟರು. ಮಕ್ಕಳು ವ್ಯಾಪಾರಿಗಳಂತೆಯೇ ಕೂಗುತ್ತಾ, ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡಿದರು. ಪೋಷಕರೂ ಮಕ್ಕಳಿಗೆ ಸಾಥ್ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…