ಮೈಸೂರು

ಮೈಸೂರು| ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ ಘಟನೆ ಖಂಡಿಸಿ ಪುಟಾಣಿಗಳು ಇಂದು ಪ್ರತಿಭಟನೆ ನಡೆಸಿದರು.

ಮೈಸೂರಿನ ಎಸ್‌ಪಿ ಕಚೇರಿಯಿಂದ ಹೈದರ್‌ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಮರಗಳನ್ನು ಕಡಿದು ಹಾಕಿರುವ ರಸ್ತೆಯಲ್ಲಿ ಪುಟಾಣಿಗಳು ಜಾಥಾ ನಡೆಸಿ, ಮರ ಉಳಿಸಿ ಎಂದು ಪ್ಲೇ ಕಾರ್ಡ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದು. ಮೈಸೂರಿಗೆ ತನ್ನದೇ ಆದ ಪರಂಪರೆಯಿದೆ. ಹೀಗಾಗಿ ಈ ಘಟನೆಗಳು ಮರುಕಳಿಸಬಾರದು ಎಂದು ಪುಟಾಣಿಗಳ ಜೊತೆಗಿದ್ದ ಜನರು ಆಗ್ರಹಿಸಿದರು.

ಇನ್ನೂ ಮರಗಳ ಹನನ ಖಂಡಿಸಿ ಏಪ್ರಿಲ್.‌17 ಹಾಗೂ 18ರಂದು ವಿವಿಧ ಸಂಘಟನೆಗಳು ಮತ್ತು ಪರಿಸರ ಪ್ರೇಮಿಗಳು ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ಪಾಲಿಕೆ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

53 mins ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

1 hour ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

2 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

3 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

14 hours ago