ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ.
ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನು ಪರೀಕ್ಷೆಗೊಳಪಡಿಸಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.
ಕಾಲರಾ ಕಾಣಿಸಿಕೊಂಡಿದ್ದು ಖಚಿತವಾಗ ಬೆನ್ನಲ್ಲೇ ಗ್ರಾಮದಲ್ಲಿ ಡಿಎಚ್ಒ ಶಿವಕುಮಾರ್ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬೋರ್ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಇದರಿಂದ ಗ್ರಾಮದ ನಾಲ್ಕು ಬೋರ್ವೆಲ್ ತಾತ್ಕಲಿಕವಾಗಿ ಸ್ಥಗಿತ ಮಾಡಲಾಗಿದೆ. ನೀರಿನ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…