ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು.
ನಗರದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೈಸೂರು ವಿವಿ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಿನಿಮಾ ಕೇವಲ ಮನರಂಜನೆಯಲ್ಲ. ಹಿಂದೆ ಸೀಮಿತ ತಂತ್ರಜ್ಞಾನವಿದ್ದರೂ ಸಮಾಜದ ವಾಸ್ತವಗಳನ್ನು ಪ್ರತಿಬಿಂಬಿ ಸುವ ಅರ್ಥಪೂರ್ಣ ಸಿನಿಮಾಗಳು ಹೆಚ್ಚಾಗಿ ಬರುತ್ತಿದ್ದವು. ಆದರೆ ಇತ್ತೀಚೆಗೆ ಅಂತಹ ಸಿನಿಮಾಗಳ ಸಂಖ್ಯೆ ವಿರಳ ವಾಗಿದೆ. ಸಿನಿಮಾ ಮನರಂಜನೆ ಜೊತೆಗೆಸಮಾಜಕ್ಕೆ ಶಿಕ್ಷಣ ನೀಡುವ ಪರಿಣಾಮ ಕಾರಿ ಮಾಧ್ಯಮವಾಗಬೇಕು. ಇಂದಿನ ಮಾಧ್ಯಮ ಗಳು ವಿಶ್ವಾಸಾರ್ಹತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಉತ್ತಮ ಸಂದೇಶಗಳನ್ನು ನೀಡಬೇಕು ಎಂದರು.
ಇದನ್ನು ಓದಿ: ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ
ನಂತರ ಗೋಷ್ಠಿಯಲ್ಲಿ ಟಿವಿ ೯ ವರದಿಗಾರ ರಾಮ್ ಮಾತನಾಡಿ, ಸುದ್ದಿ ನೀಡುವ ಆತುರದಲ್ಲಿ ನಿಖರತೆಯನ್ನು ಮರೆಯಬಾರದು. ಟಿಆರ್ಪಿ ಹಪಾಹಪಿ ಹಾಗೂ ಸಾಮಾಜಿಕ ಮಾಧ್ಯಮಗಳ ಸುಳ್ಳುಸುದ್ದಿಗಳ ಅಬ್ಬರದ ನಡುವೆ ಸತ್ಯನಿಷ್ಠ ವರದಿಗಾರಿಕೆಯೇ ಮಾಧ್ಯಮದ ಅಸ್ತಿತ್ವವನ್ನು ಉಳಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್. ಮಮತ, ಪ್ರೊ.ನಿರಂಜನ ವಾನಳ್ಳಿ, ಅತಿಥಿ ಉಪನ್ಯಾಸಕರಾದ ಡಾ.ಕುಮಾರಸ್ವಾಮಿ ಹಾಗೂ ಡಾ.ಬಿ.ಸಿ.ಸಂಜಯ್ ಉಪಸ್ಥಿತರಿದ್ದರು, ವಿದ್ಯಾರ್ಥಿಗಳು ಸಂವಾದದ ಮೂಲಕ ಹಲವು ವಿಷಯಗಳನ್ನು ಚರ್ಚಿಸಿದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…