ಮೈಸೂರು: ದಸರಾ ಹಬ್ಬಕ್ಕೂ ಮುನ್ನವೇ ದೀಪಾಲಂಕಾರದಿಂದ ಝಗಮಗಿಸುತ್ತಿದ್ದ ಮೈಸೂರು ನಗರಿ, ಮಂಗಳವಾರ, ಬುಧವಾರ ಕೂಡ ಅದೇ ರೀತಿ ಬೆಳಗಲಿದೆ.ಪೂರ್ವ ನಿರ್ಧಾರದಂತೆ, ಭಾನುವಾರಕ್ಕೆ ದೀಪಾಲಂಕಾರ ಮುಗಿಯಬೇಕಿತ್ತು. ಆದರೆ, ಅದನ್ನು ಅ. 12ರವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ.
ಈಗಲೂ ಸಾವಿರಾರು ಜನರು ಮೈಸೂರಿನ ರಸ್ತೆಗಳಲ್ಲಿ ಸಂಚರಿಸುತ್ತಾ ದಾರಿಯ ಇಕ್ಕೆಲಗಳಲ್ಲಿಯೂ ಇರುವ ದೀಪಾಲಕಾರಗಳನ್ನು ಕಂಡು ಆನಂದಿಸುತ್ತಿದ್ದಾರೆ. ಇದನ್ನು ಮನಗಂಡ ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯ ವಿಭವ ಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ (ಅ. 12ರವರೆಗೆ) ವಿಸ್ತರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಆದರೆ, ಈ ಅಲಂಕಾರವು ನಗರದ ಮಧ್ಯಭಾಗದಲ್ಲಿ ಹಾಗೂ ಕೆಲವು ಪ್ರಮುಖ ರಸ್ತೆ, ವೃತ್ತಗಳಲ್ಲಿ ಮಾತ್ರ ಸಂಜೆಯ 6:30ರಿಂದ ರಾತ್ರಿ 10:30ರವರೆಗೆ ಮಾತ್ರ ಮುಂದುವರಿಸಲಾಗುತ್ತದೆ.
ಅರಮನೆ ಸೇರಿದಂತೆ ಹಲವಾರು ಪಾರಂಪರಿಕ ಕಟ್ಟಡಗಳು, ರಸ್ತೆಗಳು, ರಸ್ತೆ ಪಕ್ಕದ ಮರ, ಪಾರ್ಕು ಎಲ್ಲವೂ ವಿದ್ಯುತ್ ದೀಪಗಳಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಇಂಥ ದೀಪಾಲಂಕಾರಗಳಿಂದಾಗಿ ಇಡೀ ನಗರಕ್ಕೆ ಸ್ವರ್ಗವೇ ಇಳಿದು ಬಂದಂತಾಗಿ ರಾತ್ರಿಯ ವೇಳೆ ಇಡೀ ಊರಲ್ಲಿ ಸಂಚರಿಸುವುದೇ ಒಂದು ಸಡಗರ ಎನ್ನುವಂತೆ ಮಾಡಿತ್ತು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…