ಮೈಸೂರು

ಮೈಸೂರು ; ಇಂದು, ನಾಳೆ ದೀಪಾಲಂಕಾರ ಮುಂದುವರಿಕೆ

ಮೈಸೂರು: ದಸರಾ ಹಬ್ಬಕ್ಕೂ ಮುನ್ನವೇ ದೀಪಾಲಂಕಾರದಿಂದ ಝಗಮಗಿಸುತ್ತಿದ್ದ ಮೈಸೂರು ನಗರಿ, ಮಂಗಳವಾರ, ಬುಧವಾರ ಕೂಡ ಅದೇ ರೀತಿ ಬೆಳಗಲಿದೆ.ಪೂರ್ವ ನಿರ್ಧಾರದಂತೆ, ಭಾನುವಾರಕ್ಕೆ ದೀಪಾಲಂಕಾರ ಮುಗಿಯಬೇಕಿತ್ತು. ಆದರೆ, ಅದನ್ನು ಅ. 12ರವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ.

ಈಗಲೂ ಸಾವಿರಾರು ಜನರು ಮೈಸೂರಿನ ರಸ್ತೆಗಳಲ್ಲಿ ಸಂಚರಿಸುತ್ತಾ ದಾರಿಯ ಇಕ್ಕೆಲಗಳಲ್ಲಿಯೂ ಇರುವ ದೀಪಾಲಕಾರಗಳನ್ನು ಕಂಡು ಆನಂದಿಸುತ್ತಿದ್ದಾರೆ. ಇದನ್ನು ಮನಗಂಡ ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯ ವಿಭವ ಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ (ಅ. 12ರವರೆಗೆ) ವಿಸ್ತರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಆದರೆ, ಈ ಅಲಂಕಾರವು ನಗರದ ಮಧ್ಯಭಾಗದಲ್ಲಿ ಹಾಗೂ ಕೆಲವು ಪ್ರಮುಖ ರಸ್ತೆ, ವೃತ್ತಗಳಲ್ಲಿ ಮಾತ್ರ ಸಂಜೆಯ 6:30ರಿಂದ ರಾತ್ರಿ 10:30ರವರೆಗೆ ಮಾತ್ರ ಮುಂದುವರಿಸಲಾಗುತ್ತದೆ.

ಅರಮನೆ ಸೇರಿದಂತೆ ಹಲವಾರು ಪಾರಂಪರಿಕ ಕಟ್ಟಡಗಳು, ರಸ್ತೆಗಳು, ರಸ್ತೆ ಪಕ್ಕದ ಮರ, ಪಾರ್ಕು ಎಲ್ಲವೂ ವಿದ್ಯುತ್ ದೀಪಗಳಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಇಂಥ ದೀಪಾಲಂಕಾರಗಳಿಂದಾಗಿ ಇಡೀ ನಗರಕ್ಕೆ ಸ್ವರ್ಗವೇ ಇಳಿದು ಬಂದಂತಾಗಿ ರಾತ್ರಿಯ ವೇಳೆ ಇಡೀ ಊರಲ್ಲಿ ಸಂಚರಿಸುವುದೇ ಒಂದು ಸಡಗರ ಎನ್ನುವಂತೆ ಮಾಡಿತ್ತು.

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

40 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

14 hours ago