ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್ ಅಡ್ವೆಂಚರ್ ಫೌಂಡೇಷನ್ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ ಫೌಂಡೇಷನ್ 22 ಜನರಿರುವ ತಂಡದೊಂದಿಗೆ ಇದೇ ಏ.23ಕ್ಕೆ ಹೊರಟು ಮೇ 8 ರವರಗೆ ಹಿಮಾಲಯ ಪರ್ವತಾರೋಹಣ ನಡೆಸಲಿದೆ.
ತಂಡಕ್ಕೆ ಜೂನೂನ್ 2025 ಎಂದು ಹೆಸರಿಡಲಾಗಿದೆ. ತಂಡದ ನಾಯಕ ಅನಿಲ್ ಕುಮಾರ್ ನಾಯಕತ್ವದಲ್ಲಿ ಮಕ್ಕಳು ಚಾರಣ ನಡೆಸಲಿದ್ದಾರೆ.
ಚಾರಣದಲ್ಲಿ 8 ಪೌರಕಾರ್ಮಿಕರ ಮಕ್ಕಳು, ಇಬ್ಬರು ಮಾವುತರು, ಇಬ್ಬರು ಗಸ್ತು ಅರಣ್ಯ ಪಾಲಕರು ಸೇರಿ 22 ಮಂದಿ ಇರಲಿದ್ದಾರೆ.
ಸುಮಾರು 15 ಸಾವಿರ ಅಡಿಗಳ ಎತ್ತರದಲ್ಲಿರುವ ಮೌಂಟ್ ಪಾಂಗರ್ ಚುಲ್ಲ ಎಂಬ ಜಾಗಕ್ಕೆ ಚಾರಣದ ಗುರಿ ಇಟ್ಟು ಮಕ್ಕಳು ಹೊರಟಿದ್ದಾರೆ .
ಮೊದಲ ಬಾರಿಗೆ ವಿಮಾನ ಏರಿ ಹೋಗುತ್ತಿದ್ದೇವೆ. ಜೀವನದಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಾಯವಾಗಲಿದೆ. ನಮ್ಮ ಜೀವನದ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದರೆ ಇಂತಹ ಸಾಹಸಗಳು ಮುಖ್ಯ. ಧೈರ್ಯವಾಗಿ ಮುನ್ನುಗ್ಗುವ ಗುರಿ ಇದೆ. ಎಲ್ಲಾ ಅನುಭವಗಳು ಹೇಗಿರಲಿದೆ ಎಂಬ ಕುತೂಹಲ ನಮಗೂ ಇದೆ ಎಂದು ಮಕ್ಕಳು ಸಂತಸ ವ್ಯಕ್ತಪಡಿಸಿದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…