ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್ ಅಡ್ವೆಂಚರ್ ಫೌಂಡೇಷನ್ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ ಫೌಂಡೇಷನ್ 22 ಜನರಿರುವ ತಂಡದೊಂದಿಗೆ ಇದೇ ಏ.23ಕ್ಕೆ ಹೊರಟು ಮೇ 8 ರವರಗೆ ಹಿಮಾಲಯ ಪರ್ವತಾರೋಹಣ ನಡೆಸಲಿದೆ.
ತಂಡಕ್ಕೆ ಜೂನೂನ್ 2025 ಎಂದು ಹೆಸರಿಡಲಾಗಿದೆ. ತಂಡದ ನಾಯಕ ಅನಿಲ್ ಕುಮಾರ್ ನಾಯಕತ್ವದಲ್ಲಿ ಮಕ್ಕಳು ಚಾರಣ ನಡೆಸಲಿದ್ದಾರೆ.
ಚಾರಣದಲ್ಲಿ 8 ಪೌರಕಾರ್ಮಿಕರ ಮಕ್ಕಳು, ಇಬ್ಬರು ಮಾವುತರು, ಇಬ್ಬರು ಗಸ್ತು ಅರಣ್ಯ ಪಾಲಕರು ಸೇರಿ 22 ಮಂದಿ ಇರಲಿದ್ದಾರೆ.
ಸುಮಾರು 15 ಸಾವಿರ ಅಡಿಗಳ ಎತ್ತರದಲ್ಲಿರುವ ಮೌಂಟ್ ಪಾಂಗರ್ ಚುಲ್ಲ ಎಂಬ ಜಾಗಕ್ಕೆ ಚಾರಣದ ಗುರಿ ಇಟ್ಟು ಮಕ್ಕಳು ಹೊರಟಿದ್ದಾರೆ .
ಮೊದಲ ಬಾರಿಗೆ ವಿಮಾನ ಏರಿ ಹೋಗುತ್ತಿದ್ದೇವೆ. ಜೀವನದಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಾಯವಾಗಲಿದೆ. ನಮ್ಮ ಜೀವನದ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದರೆ ಇಂತಹ ಸಾಹಸಗಳು ಮುಖ್ಯ. ಧೈರ್ಯವಾಗಿ ಮುನ್ನುಗ್ಗುವ ಗುರಿ ಇದೆ. ಎಲ್ಲಾ ಅನುಭವಗಳು ಹೇಗಿರಲಿದೆ ಎಂಬ ಕುತೂಹಲ ನಮಗೂ ಇದೆ ಎಂದು ಮಕ್ಕಳು ಸಂತಸ ವ್ಯಕ್ತಪಡಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…