ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್ ಅಡ್ವೆಂಚರ್ ಫೌಂಡೇಷನ್ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ ಫೌಂಡೇಷನ್ 22 ಜನರಿರುವ ತಂಡದೊಂದಿಗೆ ಇದೇ ಏ.23ಕ್ಕೆ ಹೊರಟು ಮೇ 8 ರವರಗೆ ಹಿಮಾಲಯ ಪರ್ವತಾರೋಹಣ ನಡೆಸಲಿದೆ.
ತಂಡಕ್ಕೆ ಜೂನೂನ್ 2025 ಎಂದು ಹೆಸರಿಡಲಾಗಿದೆ. ತಂಡದ ನಾಯಕ ಅನಿಲ್ ಕುಮಾರ್ ನಾಯಕತ್ವದಲ್ಲಿ ಮಕ್ಕಳು ಚಾರಣ ನಡೆಸಲಿದ್ದಾರೆ.
ಚಾರಣದಲ್ಲಿ 8 ಪೌರಕಾರ್ಮಿಕರ ಮಕ್ಕಳು, ಇಬ್ಬರು ಮಾವುತರು, ಇಬ್ಬರು ಗಸ್ತು ಅರಣ್ಯ ಪಾಲಕರು ಸೇರಿ 22 ಮಂದಿ ಇರಲಿದ್ದಾರೆ.
ಸುಮಾರು 15 ಸಾವಿರ ಅಡಿಗಳ ಎತ್ತರದಲ್ಲಿರುವ ಮೌಂಟ್ ಪಾಂಗರ್ ಚುಲ್ಲ ಎಂಬ ಜಾಗಕ್ಕೆ ಚಾರಣದ ಗುರಿ ಇಟ್ಟು ಮಕ್ಕಳು ಹೊರಟಿದ್ದಾರೆ .
ಮೊದಲ ಬಾರಿಗೆ ವಿಮಾನ ಏರಿ ಹೋಗುತ್ತಿದ್ದೇವೆ. ಜೀವನದಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಾಯವಾಗಲಿದೆ. ನಮ್ಮ ಜೀವನದ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದರೆ ಇಂತಹ ಸಾಹಸಗಳು ಮುಖ್ಯ. ಧೈರ್ಯವಾಗಿ ಮುನ್ನುಗ್ಗುವ ಗುರಿ ಇದೆ. ಎಲ್ಲಾ ಅನುಭವಗಳು ಹೇಗಿರಲಿದೆ ಎಂಬ ಕುತೂಹಲ ನಮಗೂ ಇದೆ ಎಂದು ಮಕ್ಕಳು ಸಂತಸ ವ್ಯಕ್ತಪಡಿಸಿದರು.
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ:…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…