ಮೈಸೂರು

ಹಿಮಾಲಯ ಹತ್ತಲು ಹೊರಟ ಪೌರಕಾರ್ಮಿಕ ಮಕ್ಕಳು ; ಸಾಹಸಯಾತ್ರೆಯ ಮಾರ್ಗ ತೋರಿಸಲಿರುವ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ !

ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ ಫೌಂಡೇಷನ್ 22 ಜನರಿರುವ ತಂಡದೊಂದಿಗೆ ಇದೇ ಏ.23ಕ್ಕೆ ಹೊರಟು ಮೇ 8 ರವರಗೆ ಹಿಮಾಲಯ ಪರ್ವತಾರೋಹಣ ನಡೆಸಲಿದೆ.

ತಂಡಕ್ಕೆ ಜೂನೂನ್ 2025 ಎಂದು ಹೆಸರಿಡಲಾಗಿದೆ. ತಂಡದ ನಾಯಕ ಅನಿಲ್ ಕುಮಾರ್ ನಾಯಕತ್ವದಲ್ಲಿ ಮಕ್ಕಳು ಚಾರಣ ನಡೆಸಲಿದ್ದಾರೆ.

ಚಾರಣದಲ್ಲಿ 8 ಪೌರಕಾರ್ಮಿಕರ ಮಕ್ಕಳು, ಇಬ್ಬರು ಮಾವುತರು, ಇಬ್ಬರು ಗಸ್ತು ಅರಣ್ಯ ಪಾಲಕರು ಸೇರಿ 22 ಮಂದಿ ಇರಲಿದ್ದಾರೆ.

ಸುಮಾರು 15 ಸಾವಿರ ಅಡಿಗಳ ಎತ್ತರದಲ್ಲಿರುವ ಮೌಂಟ್ ಪಾಂಗರ್ ಚುಲ್ಲ ಎಂಬ ಜಾಗಕ್ಕೆ ಚಾರಣದ ಗುರಿ ಇಟ್ಟು ಮಕ್ಕಳು ಹೊರಟಿದ್ದಾರೆ .

ಮೊದಲ ಬಾರಿಗೆ ವಿಮಾನ ಏರಿ ಹೋಗುತ್ತಿದ್ದೇವೆ. ಜೀವನದಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಾಯವಾಗಲಿದೆ. ನಮ್ಮ ಜೀವನದ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದರೆ ಇಂತಹ ಸಾಹಸಗಳು ಮುಖ್ಯ. ಧೈರ್ಯವಾಗಿ ಮುನ್ನುಗ್ಗುವ ಗುರಿ ಇದೆ. ಎಲ್ಲಾ ಅನುಭವಗಳು ಹೇಗಿರಲಿದೆ ಎಂಬ ಕುತೂಹಲ ನಮಗೂ ಇದೆ ಎಂದು ಮಕ್ಕಳು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

25 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago