ಮೈಸೂರು

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಡುವೆ ಮಾತಿನ ಚಕಮಕಿ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಬಿಜೆಪಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ನಿಂದಲೂ ಕೂಡ ಮುಡಾ ಬಳಿ ಪ್ರತಿಭಟನೆ ನಡೆಸಲಾಯಿತು.

ಮುಡಾ ಬದಿಯಲ್ಲಿರುವ ಇನ್ಸ್‌ ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಮುಂಭಾಗದ ಜೆ.ಎಲ್‌.ಬಿಯ ರಸ್ತೆಯಲ್ಲಿ ʻಬಿಜೆಪಿ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್‌ ಹೆದರುವುದಿಲ್ಲʼ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಳಿಕ  ಮುಡಾಗೆ ಮುತ್ತಿಗೆ ಹಾಕಲು ಮುಂದಾದ್ರು.

ಈ ವೇಳೆ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್‌  ನಡುವೆ ಮಾತಿನ ಚಕಮಕಿ ನಡೆಯಿತು.

ʼನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ. ನಾವೇನು ಹೊಡೆದಾಟ ಮಾಡುವ ಕೆಲಸ ಮಾಡುತ್ತಿಲ್ಲ. ನಮ್ಮ ಪಾಡಿಗೆ ನಾವು ಅರ್ಧಗಂಟೆಯಲ್ಲಿ ಪ್ರತಿಭಟನೆ ಮುಗಿಸಿ ಹೋಗುತ್ತೇವೆ. ನಾವು ಯಾಕೆ ಬಿಜೆಪಿ ಜೊತೆ ಕ್ಲ್ಯಾಶ್‌ ಮಾಡಿಕೊಳ್ಳೋಣ ನಮ್ಮ ಟೈಮಿಂಗ್ಸ್‌ ಎಷ್ಟಿದೆ ಅಷ್ಟರಲ್ಲಿ ಪ್ರತಿಭಟನೆ ಮಾಡಿ ಮೆರವಣಿಗೆ ಹೋಗುತ್ತೇವೆ ಎಂದು ಲಕ್ಷ್ಮಣ್‌ ಹೇಳಿದರು.

ಇದಕ್ಕೆ ಒಪ್ಪದ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರತಿಭಟನೆ ಎರಡರ ನಡುವೆ ಕ್ಲ್ಯಾಶ್‌ ಆಗುವ ಸಾಧ್ಯತೆ ಇದೆ. ಪೊಲೀಸ್‌ ಭದ್ರತೆ ಕೂಡ ಮಾಡಬೇಕು. ಹಾಗಾಗಿ ಸದ್ಯಕ್ಕೆ ಸಮಯಕೊಡಿ ಪೊಲೀಸರನ್ನ ನಿಯೋಜನೆ ಮಾಡಿ ನಿಮ್ಮೊಟ್ಟಿಗೆ ಮಾತನಾಡುತ್ತೇನೆ ಎಂದು ತಿಳಿ ಹೇಳಿದರು.

ಈ ವೇಳೆ ಪೊಲೀಸ್‌ ಅಧಿಕಾರಿಯೊಬ್ಬರು ೧೦ ನಿಮಿಷ ಸುಮ್ಮನಿರಿ, ಬೇಡ ಬೇಡ ಲಕ್ಷ್ಮಣ್‌ ಎಂದಿದ್ದಕ್ಕೆ ಕೋಪಗೊಂಡ ಲಕ್ಷ್ಮಣ್‌, ಏನ್ರೀ ನನ್ನನ್ನ ಕೊಂದು ಬಿಡುತ್ತಾರಾ ಬೇಡ ಬೇಡ ಅನ್ನೋದಿಕ್ಕೆ. ಕಮಿಷನರ್‌ ಏನು ಮೇಲ್ಗಡೆಯಿಂದ ಬಂದಿದ್ದಾರಾ..? ಅವರು ಪಬ್ಲಿಕ್‌ ಸರ್ವೆಂಟ್‌, ನಮ್ಮ ಮಾತು ಕೇಳಬೇಕು. ಯಾಕೆ ಅವರು ಹೋಗುತ್ತಿದ್ದಾರೆ.  ಯಾವುದೇ ಕಾರಣಕ್ಕೂ ಅವರು ಹೋಗಬಾರದು ಎಂದು ಕಿಡಿಕಾರಿದರು.

ಲಕ್ಷ್ಮಣ್‌ ಮಾತನೆಲ್ಲಾ ಪಕ್ಕದಲ್ಲೆ ನಿಂತು ಕೇಳಿಸಿಕೊಂಡ ಕಮಿಷನರ್‌  , ನನಗೆ ಈ ರೀತಿ ಮಾಡೊಕ್ಕೆ ಬರಲ್ಲ, ನಾನು ಅಲ್ಲಿಗೆ ಹೋಗಿ ಫೋನ್‌ ಮಾಡಿ ಹೇಳ್ತೀನಿ ಎಂದು ಸ್ಥಳದಿಂದ ನಿರ್ಗಮಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

7 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago