ಮೈಸೂರು

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಡುವೆ ಮಾತಿನ ಚಕಮಕಿ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಬಿಜೆಪಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ನಿಂದಲೂ ಕೂಡ ಮುಡಾ ಬಳಿ ಪ್ರತಿಭಟನೆ ನಡೆಸಲಾಯಿತು.

ಮುಡಾ ಬದಿಯಲ್ಲಿರುವ ಇನ್ಸ್‌ ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಮುಂಭಾಗದ ಜೆ.ಎಲ್‌.ಬಿಯ ರಸ್ತೆಯಲ್ಲಿ ʻಬಿಜೆಪಿ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್‌ ಹೆದರುವುದಿಲ್ಲʼ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಳಿಕ  ಮುಡಾಗೆ ಮುತ್ತಿಗೆ ಹಾಕಲು ಮುಂದಾದ್ರು.

ಈ ವೇಳೆ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್‌  ನಡುವೆ ಮಾತಿನ ಚಕಮಕಿ ನಡೆಯಿತು.

ʼನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ. ನಾವೇನು ಹೊಡೆದಾಟ ಮಾಡುವ ಕೆಲಸ ಮಾಡುತ್ತಿಲ್ಲ. ನಮ್ಮ ಪಾಡಿಗೆ ನಾವು ಅರ್ಧಗಂಟೆಯಲ್ಲಿ ಪ್ರತಿಭಟನೆ ಮುಗಿಸಿ ಹೋಗುತ್ತೇವೆ. ನಾವು ಯಾಕೆ ಬಿಜೆಪಿ ಜೊತೆ ಕ್ಲ್ಯಾಶ್‌ ಮಾಡಿಕೊಳ್ಳೋಣ ನಮ್ಮ ಟೈಮಿಂಗ್ಸ್‌ ಎಷ್ಟಿದೆ ಅಷ್ಟರಲ್ಲಿ ಪ್ರತಿಭಟನೆ ಮಾಡಿ ಮೆರವಣಿಗೆ ಹೋಗುತ್ತೇವೆ ಎಂದು ಲಕ್ಷ್ಮಣ್‌ ಹೇಳಿದರು.

ಇದಕ್ಕೆ ಒಪ್ಪದ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರತಿಭಟನೆ ಎರಡರ ನಡುವೆ ಕ್ಲ್ಯಾಶ್‌ ಆಗುವ ಸಾಧ್ಯತೆ ಇದೆ. ಪೊಲೀಸ್‌ ಭದ್ರತೆ ಕೂಡ ಮಾಡಬೇಕು. ಹಾಗಾಗಿ ಸದ್ಯಕ್ಕೆ ಸಮಯಕೊಡಿ ಪೊಲೀಸರನ್ನ ನಿಯೋಜನೆ ಮಾಡಿ ನಿಮ್ಮೊಟ್ಟಿಗೆ ಮಾತನಾಡುತ್ತೇನೆ ಎಂದು ತಿಳಿ ಹೇಳಿದರು.

ಈ ವೇಳೆ ಪೊಲೀಸ್‌ ಅಧಿಕಾರಿಯೊಬ್ಬರು ೧೦ ನಿಮಿಷ ಸುಮ್ಮನಿರಿ, ಬೇಡ ಬೇಡ ಲಕ್ಷ್ಮಣ್‌ ಎಂದಿದ್ದಕ್ಕೆ ಕೋಪಗೊಂಡ ಲಕ್ಷ್ಮಣ್‌, ಏನ್ರೀ ನನ್ನನ್ನ ಕೊಂದು ಬಿಡುತ್ತಾರಾ ಬೇಡ ಬೇಡ ಅನ್ನೋದಿಕ್ಕೆ. ಕಮಿಷನರ್‌ ಏನು ಮೇಲ್ಗಡೆಯಿಂದ ಬಂದಿದ್ದಾರಾ..? ಅವರು ಪಬ್ಲಿಕ್‌ ಸರ್ವೆಂಟ್‌, ನಮ್ಮ ಮಾತು ಕೇಳಬೇಕು. ಯಾಕೆ ಅವರು ಹೋಗುತ್ತಿದ್ದಾರೆ.  ಯಾವುದೇ ಕಾರಣಕ್ಕೂ ಅವರು ಹೋಗಬಾರದು ಎಂದು ಕಿಡಿಕಾರಿದರು.

ಲಕ್ಷ್ಮಣ್‌ ಮಾತನೆಲ್ಲಾ ಪಕ್ಕದಲ್ಲೆ ನಿಂತು ಕೇಳಿಸಿಕೊಂಡ ಕಮಿಷನರ್‌  , ನನಗೆ ಈ ರೀತಿ ಮಾಡೊಕ್ಕೆ ಬರಲ್ಲ, ನಾನು ಅಲ್ಲಿಗೆ ಹೋಗಿ ಫೋನ್‌ ಮಾಡಿ ಹೇಳ್ತೀನಿ ಎಂದು ಸ್ಥಳದಿಂದ ನಿರ್ಗಮಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

14 hours ago