ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಬಿಜೆಪಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದಲೂ ಕೂಡ ಮುಡಾ ಬಳಿ ಪ್ರತಿಭಟನೆ ನಡೆಸಲಾಯಿತು.
ಮುಡಾ ಬದಿಯಲ್ಲಿರುವ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮುಂಭಾಗದ ಜೆ.ಎಲ್.ಬಿಯ ರಸ್ತೆಯಲ್ಲಿ ʻಬಿಜೆಪಿ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್ ಹೆದರುವುದಿಲ್ಲʼ ಎಂಬ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಮುಡಾಗೆ ಮುತ್ತಿಗೆ ಹಾಕಲು ಮುಂದಾದ್ರು.
ಈ ವೇಳೆ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ನಡುವೆ ಮಾತಿನ ಚಕಮಕಿ ನಡೆಯಿತು.
ʼನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ. ನಾವೇನು ಹೊಡೆದಾಟ ಮಾಡುವ ಕೆಲಸ ಮಾಡುತ್ತಿಲ್ಲ. ನಮ್ಮ ಪಾಡಿಗೆ ನಾವು ಅರ್ಧಗಂಟೆಯಲ್ಲಿ ಪ್ರತಿಭಟನೆ ಮುಗಿಸಿ ಹೋಗುತ್ತೇವೆ. ನಾವು ಯಾಕೆ ಬಿಜೆಪಿ ಜೊತೆ ಕ್ಲ್ಯಾಶ್ ಮಾಡಿಕೊಳ್ಳೋಣ ನಮ್ಮ ಟೈಮಿಂಗ್ಸ್ ಎಷ್ಟಿದೆ ಅಷ್ಟರಲ್ಲಿ ಪ್ರತಿಭಟನೆ ಮಾಡಿ ಮೆರವಣಿಗೆ ಹೋಗುತ್ತೇವೆ ಎಂದು ಲಕ್ಷ್ಮಣ್ ಹೇಳಿದರು.
ಇದಕ್ಕೆ ಒಪ್ಪದ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಎರಡರ ನಡುವೆ ಕ್ಲ್ಯಾಶ್ ಆಗುವ ಸಾಧ್ಯತೆ ಇದೆ. ಪೊಲೀಸ್ ಭದ್ರತೆ ಕೂಡ ಮಾಡಬೇಕು. ಹಾಗಾಗಿ ಸದ್ಯಕ್ಕೆ ಸಮಯಕೊಡಿ ಪೊಲೀಸರನ್ನ ನಿಯೋಜನೆ ಮಾಡಿ ನಿಮ್ಮೊಟ್ಟಿಗೆ ಮಾತನಾಡುತ್ತೇನೆ ಎಂದು ತಿಳಿ ಹೇಳಿದರು.
ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ೧೦ ನಿಮಿಷ ಸುಮ್ಮನಿರಿ, ಬೇಡ ಬೇಡ ಲಕ್ಷ್ಮಣ್ ಎಂದಿದ್ದಕ್ಕೆ ಕೋಪಗೊಂಡ ಲಕ್ಷ್ಮಣ್, ಏನ್ರೀ ನನ್ನನ್ನ ಕೊಂದು ಬಿಡುತ್ತಾರಾ ಬೇಡ ಬೇಡ ಅನ್ನೋದಿಕ್ಕೆ. ಕಮಿಷನರ್ ಏನು ಮೇಲ್ಗಡೆಯಿಂದ ಬಂದಿದ್ದಾರಾ..? ಅವರು ಪಬ್ಲಿಕ್ ಸರ್ವೆಂಟ್, ನಮ್ಮ ಮಾತು ಕೇಳಬೇಕು. ಯಾಕೆ ಅವರು ಹೋಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರು ಹೋಗಬಾರದು ಎಂದು ಕಿಡಿಕಾರಿದರು.
ಲಕ್ಷ್ಮಣ್ ಮಾತನೆಲ್ಲಾ ಪಕ್ಕದಲ್ಲೆ ನಿಂತು ಕೇಳಿಸಿಕೊಂಡ ಕಮಿಷನರ್ , ನನಗೆ ಈ ರೀತಿ ಮಾಡೊಕ್ಕೆ ಬರಲ್ಲ, ನಾನು ಅಲ್ಲಿಗೆ ಹೋಗಿ ಫೋನ್ ಮಾಡಿ ಹೇಳ್ತೀನಿ ಎಂದು ಸ್ಥಳದಿಂದ ನಿರ್ಗಮಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…