ಮೈಸೂರು : ಮಾವಿನಹಣ್ಣು ಬೆಳೆಯಲ್ಲಿ ಪಾಲು ನೀಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಒಡೆಯರ ಹೋಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಮಲ್ಲೇಶ್ (50) ಕೊಲೆಯಾದ ವ್ಯಕ್ತಿ. ಮೃತರ ತಮ್ಮನ ಮಗ ಚೇತನ್ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.
ಘಟನೆ ವಿವರ ; ಜಮೀನಿನಲ್ಲಿ ಮಾವಿನ ಫಲವು ಬೆಳೆದಿದೆ. ಬೆಳೆದ ಬೆಳೆಯಲ್ಲಿ ಮೃತ ಮಲ್ಲೇಶ್ರಿಂದ ಚೇತನ್ ಪಾಲು ಕೇಳಿದ್ದಾರೆ. ಆದರೆ ಮಲ್ಲೇಶ್ ಪಾಲು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಚೇತನ್ ಚಾಕುವಿನಿಂದ ಚುಚ್ಚಿ ಮಲ್ಲೇಶ್ರನ್ನು ಬರ್ಬರವಾಗಿ ಕೊಂದಿದ್ದಾನೆ. ಬಳಿಕ ಆರೋಪಿ ಚೇತನ್ ತಲೆಮರೆಸಿಕೊಂಡಿದ್ದಾರೆ.
ಈ ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…