Cleanliness campaign at the foot of Chamundi Hills Collection of plastic liquor bottles
ಮೈಸೂರು: ಮೈಸೂರು ಯುವಾ ಬ್ರಿಗೇಡ್ ವತಿಯಿಂದ ಚಾಮುಂಡಿ ಬೆಟ್ಟದ ಮೆಟ್ಟಿಲಿನಲ್ಲಿ, ಬೆಟ್ಟದ ಸ್ವಚ್ಚತಾ ಅಭಿಯಾನ, ಪ್ಲಾಸ್ಟಿಕ್, ಮದ್ಯದ ಸೀಸೆಗಳನ್ನು ಸಂಗ್ರಹಿಸುವ ಕಾರ್ಯವನ್ನು ಬ್ರಿಗೇಡ್ನ ನೂರಾರು ಕಾರ್ಯಕರ್ತರು ನಡೆಸಿದರು.
ಸ್ವಚ್ಚತಾ ಅಭಿಯಾನಕ್ಕೆ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಕಾರ್ಯಾಲಯ ಕೈಜೋಡಿಸಿ. ತ್ಯಾಜ್ಯ ಸಂಗ್ರಹಣೆ, ವಿಲೇವಾರಿಗೆ ಟ್ರಾಕ್ಟರ್ ವ್ಯವಸ್ಥೆಯನ್ನು ಒದಗಿಸಿದರು. ಎರಡು ಟ್ರ್ಯಾಕ್ಟರ್ಗೂ ಹೆಚ್ಚಿನ ಪ್ಲಾಸ್ಟಿಕ್ ಬಾಟಲ್, ಕವರ್, ಮದ್ಯದ ಸೀಸೆಗಳು ಸೇರಿದಂತೆ ತ್ಯಾಜ್ಯವನ್ನು ಸಂಗ್ರಹಿಸಿದರು. ಜೊತೆಗೆ ಬೆಟ್ಟದ ಮೆಟ್ಟಿಲು ಹತ್ತುವ ಭಕ್ತರಿಗೆ ಹಾಗೂ ಚಾರಣಿಗರಿಗೆ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲಾಯಿತು.
ಅಭಿಯಾನದಲ್ಲಿ ಭಾಗಹಿಸಿ ಮಾತನಾಡಿದ ಯುವಾ ಬ್ರಿಗೇಡ್ ರಾಜ್ಯ ಸಂಚಾಲಕ ಚಂದ್ರಶೇಖರ್, ಪ್ಲಾಸ್ಟಿಕ್ ಬಾಟಲ್, ಕವರ್ ಸಿಗುವುದು ಸಾಮಾನ್ಯ. ಆದರೆ ಪವಿತ್ರ ಕ್ಷೇತ್ರದ ಉದ್ದಕ್ಕೂ ಸಾವಿರಾರು ಮದ್ಯದ ಸೀಸೆಗಳು ಸಿಕ್ಕಿದ್ದು ಆತಂಕದ ಸಂಗತಿ ಎಂದರು.
ಧಾರ್ಮಿಕ ಶ್ರದ್ದೆ ಇರುವ ಸ್ಥಳಗಳಲ್ಲಿ ಈ ರೀತಿ ಮಾಡಿರುವುದು ಹೀನ ಕೃತ್ಯ. ಮದ್ಯ, ಸಾರಾಯಿ ಕುಡಿಯಲೆಂದೆ ಬಾರ್, ಪಬ್, ರೆಸ್ಟೋರೆಂಟ್ಗಳಿವೇ ಅವನ್ನು ಬಳಸಬೇಕು. ಹೊರತು ಪವಿತ್ರ ಸ್ಥಳಗಳಲ್ಲಿ ಇಂತಹ ಕೃತ್ಯ ಎಸಗುವ ದುಷ್ಟಕೃತ್ಯಗಳು. ಅಂತಹ ಕಿಡಿಗೇಡಿಗಳ ವಿರುದ್ದ ಪೋಲಿಸರು ಕಟ್ಟು ನಿಟ್ಟಿನ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಬ್ರಿಗೇಡ್ನ ಮೈಸೂರು ವಿಭಾಗ ಸಂಚಾಲಕ ಪ್ರಮೋದ್, ಜಿಲ್ಲಾ ಸಂಚಾಲಕ ನಿತಿನ್, ಸಾಗರ್, ರಾಮಾನುಜ, ಪ್ರಶಾಂತ್, ಅಶ್ವಥ್, ಯೋಗೀಶ್, ಸೂರಿ, ಸ್ಕಂದ, ಪರಿಕ್ಷಿತ್, ಶಶಾಂಕ್, ಓಂ, ರಮೇಶ್, ನಾರಯಣ, ಮಂಜುನಾಥ್, ನರಸಿಂಹ ಮೂರ್ತಿ, ಸುಹಾಸ್, ಸುಶ್ಮಿತಾ, ಸುರಭಿ , ರಚನಾ ಶಿವಕುಮಾರ್, ದರ್ಶಿನಿ, ರೋಜಾ, ಶಿಲ್ಪಾ ರವಿ, ಪ್ರೀತಮ್ ದೈವಿಕ್, ಶ್ರೀನಿಧಿ, ಮಯೂರ್, ಚರಣ್, ಶಿವಕುಮಾರ್ , ದಿಲೀಪ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…
ಛತ್ತೀಸ್ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…
ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್ಲೈನ್ ಡೆಲಿವರಿ ಬಾಯ್ಸ್ ವೇಷದಲ್ಲಿ…
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…