ಮೈಸೂರು

ವಾಯುಭಾರ ಕುಸಿತ| ಮೈಸೂರಲ್ಲಿ ಮೋಡಕವಿದ ವಾತಾವರಣ

ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಮೈಸೂರಲ್ಲೂ ಸಹ ಮುಂಜಾನೆಯಿಂದಲೇ ಮೋಡಕವಿದ ವಾತವರಣ ಸೃಷ್ಟಿಯಾಗಿದೆ.

ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದ್ದು, ಮೈಸೂರು ಬೆಂಗಳೂರು ಸೇರಿದಂತೆ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕಳೆದೊಂದು ವಾರದಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದ ಭಾಗಗಳಲ್ಲಿ ಫೆಂಗಲ್‌ ಚಂಡಮಾರುತದಿಂದಾದ ಅವಾಂತರಗಳಿಂದ ಜನರು ಸುಧಾರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯ ಮತ್ತೊಂದು ಚಂಡಮಾರುತ ಆತಂಕ ಸೃಷ್ಟಿಸಿದೆ.

ತಮಿಳುನಾಡಲ್ಲಿ ವ್ಯಾಪಕ ಮಳೆ
ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತಮಿಳುನಾಡಿನ ಸುಮಾರು 22 ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ಕಾರೈಕಲ್‌ನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಆದಿರಾಮಪಟ್ಟಣಂ, ನಾಗಪಟ್ಟಣಂ, ಕಡಲೂರು ಹಾಗೂ ಚೆನ್ನೈನ ಕೆಲವು ಭಾಗದಲ್ಲಿ 5 ರಿಂದ 7 ಸೆಂ. ಮೀ ಮಳೆಯಾಗಿದೆ.

ಡಿ.13 ರವರೆಗೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಪುದುಚೇರಿ, ಆಂಧ್ರಪ್ರದೇಶಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…

1 hour ago

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…

1 hour ago

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…

2 hours ago

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…

2 hours ago

ಕೊಡಗು | ಜಿಲ್ಲಾಸ್ಪತ್ರೆಗೆ ದೀಢೀರ್‌ ಭೇಟಿ ನೀಡಿದ ಶಾಸಕ ಮಂತರ್‌ಗೌಡ

ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ…

2 hours ago

ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌…

4 hours ago