ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಮೈಸೂರಲ್ಲೂ ಸಹ ಮುಂಜಾನೆಯಿಂದಲೇ ಮೋಡಕವಿದ ವಾತವರಣ ಸೃಷ್ಟಿಯಾಗಿದೆ.
ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದ್ದು, ಮೈಸೂರು ಬೆಂಗಳೂರು ಸೇರಿದಂತೆ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದೊಂದು ವಾರದಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದ ಭಾಗಗಳಲ್ಲಿ ಫೆಂಗಲ್ ಚಂಡಮಾರುತದಿಂದಾದ ಅವಾಂತರಗಳಿಂದ ಜನರು ಸುಧಾರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯ ಮತ್ತೊಂದು ಚಂಡಮಾರುತ ಆತಂಕ ಸೃಷ್ಟಿಸಿದೆ.
ತಮಿಳುನಾಡಲ್ಲಿ ವ್ಯಾಪಕ ಮಳೆ
ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತಮಿಳುನಾಡಿನ ಸುಮಾರು 22 ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಕಾರೈಕಲ್ನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಆದಿರಾಮಪಟ್ಟಣಂ, ನಾಗಪಟ್ಟಣಂ, ಕಡಲೂರು ಹಾಗೂ ಚೆನ್ನೈನ ಕೆಲವು ಭಾಗದಲ್ಲಿ 5 ರಿಂದ 7 ಸೆಂ. ಮೀ ಮಳೆಯಾಗಿದೆ.
ಡಿ.13 ರವರೆಗೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಪುದುಚೇರಿ, ಆಂಧ್ರಪ್ರದೇಶಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…