ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಮೈಸೂರಲ್ಲೂ ಸಹ ಮುಂಜಾನೆಯಿಂದಲೇ ಮೋಡಕವಿದ ವಾತವರಣ ಸೃಷ್ಟಿಯಾಗಿದೆ.
ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದ್ದು, ಮೈಸೂರು ಬೆಂಗಳೂರು ಸೇರಿದಂತೆ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದೊಂದು ವಾರದಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದ ಭಾಗಗಳಲ್ಲಿ ಫೆಂಗಲ್ ಚಂಡಮಾರುತದಿಂದಾದ ಅವಾಂತರಗಳಿಂದ ಜನರು ಸುಧಾರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯ ಮತ್ತೊಂದು ಚಂಡಮಾರುತ ಆತಂಕ ಸೃಷ್ಟಿಸಿದೆ.
ತಮಿಳುನಾಡಲ್ಲಿ ವ್ಯಾಪಕ ಮಳೆ
ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತಮಿಳುನಾಡಿನ ಸುಮಾರು 22 ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಕಾರೈಕಲ್ನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಆದಿರಾಮಪಟ್ಟಣಂ, ನಾಗಪಟ್ಟಣಂ, ಕಡಲೂರು ಹಾಗೂ ಚೆನ್ನೈನ ಕೆಲವು ಭಾಗದಲ್ಲಿ 5 ರಿಂದ 7 ಸೆಂ. ಮೀ ಮಳೆಯಾಗಿದೆ.
ಡಿ.13 ರವರೆಗೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಪುದುಚೇರಿ, ಆಂಧ್ರಪ್ರದೇಶಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…