Categories: ಮೈಸೂರು

ಹೆಚ್.ಡಿ ಕೋಟೆಗೆ 140 ಕೋಟಿ ಸವಲತ್ತು ವಿತರಿಸಿದ ಸಿಎಂ

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಇದನ್ನೂ ಓದಿ:- ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

ಬಿಜೆಪಿಯವರು ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

14 mins ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

32 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

57 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

1 hour ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

4 hours ago