Mysore
29
broken clouds

Social Media

ಮಂಗಳವಾರ, 05 ಮೇ 2026
Light
Dark

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್ ಎಂದು ಹೇಳಿದರು.

ಇನ್ನು ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸ ಇದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ನನಗೆ ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ನೀವು ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದು ಹೇಳಿದರು.

 

Tags:
error: Content is protected !!