ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್ ಎಂದು ಹೇಳಿದರು.
ಇನ್ನು ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸ ಇದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ನನಗೆ ಬಜೆಟ್ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ನೀವು ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…