ಮೈಸೂರು

ನಾಳೆ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಲಿದ್ದಾರೆ.

ಹೊಸದಿಲ್ಲಿಯಿಂದ ಕೇರಳಕ್ಕೆ ಮೈಸೂರು ಮಾರ್ಗವಾಗಿ ತೆರಳಲಿರುವ ರಾಹುಲ್‌ಗಾಂಧಿ ಅವರನ್ನು ಇಬ್ಬರು ಒಟ್ಟಾಗಿ ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ಎಐಸಿಸಿ ನಾಯಕರೂ ಆದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರು ಹೊಸದಿಲ್ಲಿಯಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಲಿದ್ದಾರೆ. ನಂತರ ವಿಶೇಷ ಹೆಲಿಕ್ಯಾಪ್ಟರ್‌ನಲ್ಲಿ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮತ್ತೆ ಸಂಜೆ 6 ಕ್ಕೆ ಮೈಸೂರಿಗೆ ಆಗಮಿಸಿ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಪಯಣ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗೇ ವಿಶೇಷ ವಿಮಾನದಲ್ಲಿ ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ.

ರಾಹುಲ್ ಗಾಂಧಿ ಅವರು ಕೇರಳದಿಂದ ವಾಪಸ್ ಬರುವ ತನಕವೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರ ಸಮಯವನ್ನು ಕಾಯ್ದಿರಿಸಲಾಗಿದೆ. ಎರಡು ಬಾರಿ ಹೊಸದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರಿಗೆ ರಾಹುಲ್ ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಭೇಟಿ ಸಾಧ್ಯವಾಗಿರಲಿಲ್ಲ. ಮಂಗಳವಾರ ಈ ಇಬ್ಬರು ಸಚಿವ ಸಂಪುಟ ಪುನಾರಚನೆ, ಬಜೆಟ್ ತಯಾರಿ ಇನ್ನಿತರ ಅಂಶಗಳನ್ನು ಕುರಿತು ಚರ್ಚಿಸಲಿದ್ದು, ಸಿಎಂ ಗ್ರೀನ್ ಸಿಗ್ನಲ್ ಪಡೆಯಬಹುದೆಂದು ಮೂಲಗಳು ಹೇಳಿವೆ. ಸಿಎಂ ಜತೆಗೆ ಡಿಸಿಎಂ ಕೂಡ ಒಟ್ಟಿಗೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದರಿಂದ ಕುತೂಹಲ ಹೆಚ್ಚಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

15 mins ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

18 mins ago

ಖಮೇನಿ ಹತ್ಯೆ ವಿರೋಧಿಸಿ ಪ್ರತಿಭಟನೆ: ಕಾಶ್ಮೀರದಲ್ಲಿ ಕಠಿಣ ನಿರ್ಬಂಧ

ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ…

22 mins ago

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ…

25 mins ago

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ…

28 mins ago

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…

53 mins ago